2006ರ ಸಿಇಟಿ ಕಾಯ್ದೆ ಜಾರಿಗೆ ತರಲು ಸಂಪುಟದ ಒಪ್ಪಿಗೆ
ಬೆಂಗಳೂರು, ಮೇ 26 : ಮುಂದಿನ ಶೈಕ್ಷಣಿಕ ವರ್ಷದಿಂದ 2006ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಯನ್ನು ಕೆಲವು ತಿದ್ದುಪಡಿಗಳೊಂದಿಗೆ ಜಾರಿಗೆ ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ
ಸಿದ್ದರಾಮಯ್ಯ
ನೇತೃತ್ವದಲ್ಲಿ
ವಿಧಾನಸೌಧದಲ್ಲಿ
ಸೋಮವಾರ
ಸಂಜೆ
ಸಚಿವ
ಸಂಪುಟ
ಸಭೆ
ನಡೆಯಿತು.
ಸಭೆಯಲ್ಲಿ
2015-16ನೇ
ಶೈಕ್ಷಣಿಕ
ವರ್ಷದಿಂದ
'ಕರ್ನಾಟಕ
ವೃತ್ತಿ
ಶಿಕ್ಷಣ
ಸಂಸ್ಥೆಗಳ
(ಪ್ರವೇಶ
ನಿಯಂತ್ರಣ
ಮತ್ತು
ಶುಲ್ಕ
ನಿಗದಿ)
ಕಾಯ್ದೆ
-
2006'
ಜಾರಿಗೆ
ತರಲು
ನಿರ್ಧಾರ
ಕೈಗೊಳ್ಳಲಾಗಿದೆ.
[ಸಿಇಟಿ
ಕಾಯ್ದೆ
ಯಾರಿಗೆ
ಲಾಭ?
ಯಾರಿಗೆ
ನಷ್ಟ?]
ಸರ್ಕಾರ ಮತ್ತು ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳ ನಡುವೆ ಪ್ರತಿ ವರ್ಷ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ವಿಚಾರದಲ್ಲಿ ಒಪ್ಪಂದವಾಗುತ್ತಿತ್ತು. ಇದರ ಅನ್ವಯ ಇಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟುಗಳು ಭರ್ತಿಯಾಗುತ್ತಿದ್ದವು. [ಸಿಇಟಿ ಕಾಯ್ದೆ ಜಾರಿಗೆ ಬಂದರೆ, ಕಾಮೆಡ್-ಕೆ ರದ್ದು?]
ಈ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ತಂದು ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ. ಆದರೆ, ಯಾವ ಕೋರ್ಸ್ಗೆ ಎಷ್ಟು ಶುಲ್ಕ? ಎಂಬ ವಿಚಾರ ಇನ್ನೂ ಅಂತಿಮಗೊಂಡಿಲ್ಲ.
ಸಂಪುಟ ಸಭೆಯ ಇತರ ತೀರ್ಮಾನಗಳು
* ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇನ್ನೊಂದಿಷ್ಟು ಮಾಹಿತಿ ಕಲೆ ಹಾಕೋಣ. ಈ ವಿಷಯವನ್ನು ಮತ್ತೆ ಚರ್ಚಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಹೇಳಿದರು ಎಂದು ತಿಳಿದುಬಂದಿದೆ.
* ಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಲು ಸಚಿವ ಸಂಪು ಸಭೆ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ವ್ಯಾಪ್ತಿಯನ್ನು ಒಳಗೊಂಡಿದ್ದ ಬೆಂಗಳೂರು ವಿವಿ ಇನ್ನು ಮೂರು ವಿವಿಗಳಾಗಿ ಕಾರ್ಯನಿರ್ವಹಿಸಲಿವೆ. ಈ ವಿವಿಗಳು ಪ್ರತ್ಯೇಕ ಆಡಳಿತ ಕಚೇರಿಯನ್ನು ಹೊಂದಲಿವೆ.