ಜ.3ಕ್ಕೆ ಬೆಂಗಳೂರಿಗೆ ಬರ್ತಾರೆ ಅಮಿತ್ ಶಾ
ಬೆಂಗಳೂರು, ಡಿ. 28 : ದಕ್ಷಿಣ ಭಾರತದ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ದಕ್ಷಿಣದ ರಾಜ್ಯದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ತಂತ್ರ ರೂಪಿಸುತ್ತಿದೆ. ಜ. 19 ರಿಂದ 21ರ ವರೆಗೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ. ಅದಕ್ಕೂ ಮೊದಲು ಜ.3ರಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಶನಿವಾರ
ಹುಬ್ಬಳ್ಳಿಯಲ್ಲಿ
ಮತನಾಡಿರುವ
ಕರ್ನಾಟಕ
ಬಿಜೆಪಿ
ಅಧ್ಯಕ್ಷ
ಪ್ರಹ್ಲಾದ್
ಜೋಶಿ
ಅವರು,
ಪಕ್ಷದ
ರಾಷ್ಟ್ರೀಯ
ಅಧ್ಯಕ್ಷ
ಅಮಿತ್
ಷಾ
ಜನವರಿ
3ರಂದು
ಬೆಂಗಳೂರಿಗೆ
ಬರಲಿದ್ದು,
ಕೋರ್
ಕಮಿಟಿ
ಸಭೆಯಲ್ಲಿ
ಪಾಲ್ಗೊಳ್ಳುವರು
ಎಂದು
ಹೇಳಿದರು.
ಕೋರ್ ಕಮಿಟಿ ಸಭೆ ನಂತರ ಪಕ್ಷದ ಎಲ್ಲ ಶಾಸಕರು, ಸಂಸದರ ಸಭೆ ನಡೆಯಲಿದೆ. ಪಕ್ಷ ಸಂಘಟನೆ ಬಲಪಡಿಸುವುದು ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಕೈಗೊಳ್ಳಬೇಕಾದ ಹೋರಾಟ ಕುರಿತು ಅಮಿತ್ ಶಾ ಚರ್ಚಿಸುವರು ಎಂದು ಜೋಶಿ ತಿಳಿಸಿದರು. [ಬಿಜೆಪಿ ಸೇರಿದ ನೆಪೋಲಿಯನ್, ಶಾ ಕಾರ್ಯತಂತ್ರ ಶುರು]
ಜ.19ರಿಂದ ಕಾರ್ಯಾಕಾರಣಿ : ದಕ್ಷಿಣ ಭಾರತದ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ದಕ್ಷಿಣದ ರಾಜ್ಯದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ತಂತ್ರ ರೂಪಿಸುತ್ತಿದೆ. ಆದ್ದರಿಂದ ಜ. 19 ರಿಂದ 21ರ ವರೆಗೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ತಂತ್ರ ರೂಪಿಸುತ್ತಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಗಟ್ಟಿಯಾಗಿ ಉಳಿದುಕೊಂಡಿದೆ. ಆದ್ದರಿಂದ ಕರ್ನಾಟಕಕ್ಕೆ ವಿಶೇಷ ಗಮನ ನೀಡಲಾಗುತ್ತಿದೆ.