ಎಪಿಎಲ್ ಕಾರ್ಡ್ದಾರರಿಗೆ ಜೂ.1ರಿಂದ ಅಕ್ಕಿ ಭಾಗ್ಯ
ಬೆಂಗಳೂರು, ಏ.6 : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 'ಅನ್ನಭಾಗ್ಯ' ಯೋಜನೆ ಇರುವಂತೆ ಎಪಿಎಲ್ ಕಾರ್ಡುದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. ಜೂ.1ರಿಂದ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ
ಸೋಮವಾರ
ಮಾಧ್ಯಮಗಳೊಂದಿಗೆ
ಮಾತನಾಡಿದ
ಆಹಾರ
ಮತ್ತು
ನಾಗರಿಕ
ಪೂರೈಕೆ
ಸಚಿವ
ದಿನೇಶ್
ಗುಂಡೂರಾವ್,
ಜೂ.1ರಿಂದ
ಎಪಿಎಲ್
ಪಡಿತರ
ಚೀಟಿ
ಹೊಂದಿರುವವರಿಗೆ
10
ಕೆಜಿ
ಅಕ್ಕಿ
ನೀಡಲಾಗುತ್ತದೆ
ಎಂದರು.
[ಎಪಿಎಲ್
ಕಾರ್ಡ್
ಹೊಂದಿದ್ದರೆ
ಅಕ್ಕಿ
ಸಿಗುತ್ತೆ]
ಏ.10ರಿಂದ ಪಡಿತರ ಪಡೆಯುವವರು ನಾಡಕಚೇರಿ, ಅಟಲ್ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕಚೇರಿಗಳಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಈ ಪ್ರಕ್ರಿಯೆ ಮೇ ಅಂತ್ಯದವರೆಗೂ ನಡೆಯಲಿದ್ದು, ಜೂ.1ರಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು. [ಪಡಿತರದ ಜೊತೆ ಸಿಗಲಿದೆ ಬೇಳೆ, ತಾಳೆ ಎಣ್ಣೆ, ಉಪ್ಪು]
ಅಕ್ಕಿ ಜೊತೆ ಬೇಳೆ, ಉಪ್ಪು : ಬಿಪಿಎಲ್, ಅಂತ್ಯೋದಯ ಹಾಗೂ ಎಪಿಎಲ್ ಕುಟುಂಬಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಇದರೊಂದಿಗೆ ಸಬ್ಸಿಡಿ ದರದಲ್ಲಿ ಬೇಳೆಕಾಳು, ತಾಳೆ ಎಣ್ಣೆ ಹಾಗೂ ಉಪ್ಪು ವಿತರಿಸುವ ಬಗ್ಗೆ ಘೋಷಣೆ ಮಾಡಲಾಗಿದೆ. ಮೇ.1ರಿಂದ ಇದನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.[ನೀವು ತಿನ್ನುವ ಅಕ್ಕಿ ಯಾವುದರಿಂದ ಮಾಡಿದ್ದು!?]
1000 ಕೋಟಿ ಉಳಿತಾಯ : ಕಳೆದ ವರ್ಷ ಅನ್ನಭಾಗ್ಯ ಯೋಜನೆ ಅನುದಾನದಲ್ಲಿ 1000 ಕೋಟಿ ರೂ. ಉಳಿತಾಯವಾಗಿದೆ. ಈ ವರ್ಷ 2,200 ಕೋಟಿ ರೂ. ನಿಗದಿಪಡಿಸಲಾಗಿದೆ. ನಕಲಿ ಕಾರ್ಡ್ಗಳ ಹಾವಳಿ ತಡೆಗಟ್ಟಿರುವುದರಿಂದ ಈ ಉಳಿತಾಯ ಸಾಧ್ಯವಾಗಿದೆ ಎಂದು ಸಚಿವರು ತಿಳಿಸಿದರು.
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 'ಅನ್ನಭಾಗ್ಯ' ಯೋಜನೆ ಇರುವಂತೆ ಎಪಿಎಲ್ ಕಾರ್ಡುದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವು ದಿನಗಳ ಹಿಂದೆ ಘೋಷಣೆ ಮಾಡಿದ್ದರು.