ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಿರಾಣಿ ವ್ಯಾಪಾರಿ ಮಗ ಯುಪಿಎಸ್ಸಿ ಸಾಧಕ ಕಿಶೋರ್

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಮೇ 12: ಜಮಖಂಡಿ ತಾಲೂಕಿನ ಬನಹಟ್ಟಿ- ರಬಕವಿ ನಗರದ ಕಿರಾಣಿ ವ್ಯಾಪಾರಸ್ಥ ಬದ್ರಿನಾರಾಯಣ ಭಟ್ಟಡ ಹಾಗು ಉಮಾ ದಂಪತಿ ಮಗ ಕಿಶೋರ ಈಗ ಬಾಗಲಕೋಟೆ ಜಿಲ್ಲೆಯ ಹೆಮ್ಮೆಯ ಪುತ್ರನಾಗಿ ಹೆಸರು ಗಳಿಸಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ವು ಮಂಗಳವಾರ ಪ್ರಕಟಿಸಿದ ಫಲಿತಾಂಶದಲ್ಲಿ ರಾಷ್ಟ್ರಕ್ಕೆ 808ನೇ rank ಪಡೆಯುವದರ ಮೂಲಕ ಸಾಧನೆ ಮಾಡಿದ್ದಾರೆ. [ಕನ್ನಡದಲ್ಲೇ ಯುಪಿಎಸ್ಸಿ ಬರೆದ ಭೈರಪ್ಪ ಸಂದರ್ಶನ]

ಈ ಬಗ್ಗೆ ನಮ್ಮ ಪ್ರತಿನಿಧಿ ಜತೆ ಮಾತನಾಡಿದ ಕಿಶೋರ, ಕಳೆದ ವರ್ಷವು ಈ ಪರೀಕ್ಷೆಯನ್ನು ಎದುರಿಸಿದ್ದೆ, ಇದು ನನ್ನ ಎರಡನೇಯ ಪ್ರಯತ್ನ ಈ ಭಾರಿ 808 ನೇ ಸ್ಥಾನ ಪಡೆದುಕೊಂಡಿದ್ದೇನೆ. ಫಲಿತಾಂಶವನ್ನು ಕೇಳಿ ತುಂಬಾ ಸಂತೋಷವಾಗಿದೆ. ಇದು ನನಗೆ ತೃಪ್ತಿ ನೀಡಿದೆ ಮುಂದಿನ ಸಲ ಹೆಚ್ಚಿನ ಶ್ರೇಯಾಂಕ ಸ್ಥಾನ ಇನ್ನಷ್ಟು ಹೆಚ್ಚಿಸಿಕೊಳ್ಳಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಪ್ರತಿ ದಿನ 10 ಗಂಟೆಗಳ ಕಾಲ ಓದುತ್ತಿದ್ದೆ, ಭೂಗೋಳ ಶಾಸ್ತ್ರ ನನ್ನ ವಿಷಯವಾಗಿತ್ತು ಎಂದು ತಿಳಿಸಿದರು.[ರೈತನ ಮಗಳು ಮಿಶಲ್ ಯುಪಿಎಸ್ಸಿ ಸಾಧಕಿ!]

ಕಿಶೋರ ಪ್ರತಿಭಾವಂತ: ಇವರು ಆರಂಭದಿಂದಲೂ ಪ್ರತಿಭಾವಂತ ವಿದ್ಯಾರ್ಥಿ, ಎಸ್‍ಎಸ್‍ಎಲ್ಸಿ ಪರೀಕ್ಷೆಯಲ್ಲಿ ಶೇ.95.2 ಅಂಕಗಳೊಂದಿಗೆ ರಾಮಪೂರದ ಪೂರ್ಣಪ್ರಜ್ಞ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದರು.

Kishore Bhattad

ಬನಹಟ್ಟಿಯ ಎಸ್‍ಆರ್‍ಎ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರವೇಶ ಪಡೆದು ದ್ವಿತೀಯ ಪರೀಕ್ಷೆಯಲ್ಲಿ ಶೇ.91.83 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದರು. ನಂತರ ಸಿಇಟಿ ಪರೀಕ್ಷೆಯಲ್ಲಿ ವೈದ್ಯಕೀಯ ವಿಭಾಗದಲ್ಲಿ ಮಹತ್ವದ ಸ್ಥಾನ ಅಂದರೆ ರಾಜ್ಯಕ್ಕೆ 6 ನೇ rank ಪಡೆದು ದಾಖಲೆ ನಿರ್ಮಿಸಿದ್ದರು.[56ನೇ ಶ್ರೇಯಾಂಕ ಪಡೆದ ಮೈಸೂರಿನ ಹುಡುಗ]

ನಂತರ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಷಾನ ಸಂಸ್ಥೆಯಿಂದ 2013ರಲ್ಲಿ ಎಂಬಿಬಿಎಸ್ ಪದವಿ ಪಡೆದು ಭಾರತೀಯ ಲೋಕಸೇವಾ ಆಯೋಗದ ಪರೀಕ್ಷೆ ತಯಾರಿ ನಡೆಸಿದರು. ಈಗ ತಮ್ಮ ಎರಡನೇಯ ಪ್ರಯತ್ನದಲ್ಲಿ 808 ನೇ ಸ್ಥಾನ ಪಡೆದು ರಬಕವಿ-ಬನಹಟ್ಟಿ ನಗರಕ್ಕೆ ಕೀರ್ತಿ ತಂದಿದ್ದಾರೆ.

ನನ್ನ ಸಾಧನೆಗೆ ತಂದೆ-ತಾಯಿ ಹಾಗು ಚಿಕ್ಕಪ್ಪಂದಿರು, ಸಹೋದರರ ಸಹಾಯ ಅನನ್ಯ. ಅದರೊಂದಿಗೆ ಪ್ರೊ. ಕೆ.ಎಚ್. ಸಿನ್ನೂರ ಹಾಗು ಪ್ರಾಚಾರ್ಯ ಬಸವರಾಜ ಕೊಣ್ಣೂರರು ವಿದ್ಯಾರ್ಜನೆಗೆ ಬೆನ್ನೆಲುಬಾಗಿ ಶ್ರಮಿಸಿದ್ದಾರೆ.'[ಯುಪಿಎಸ್ಸಿ ಫಲಿತಾಂಶ : ಕರ್ನಾಟಕದ ಗೌಡಗೆ 105ನೇ ಸ್ಥಾನ]

ಪ್ರೊ. ಕೆ.ಎಚ್. ಸಿನ್ನೂರ. ಭೌತಶಾಸ್ತ್ರ ಉಪನ್ಯಾಸಕರು : ಕಿಶೋರ ಭಟ್ಟಡ ಓರ್ವ ಛಲಗಾರ. ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಅವರದಾಗಿತ್ತು. ತುಂಬಾ ಪರಿಶ್ರಮದಿಂದ ದೇಶದ ಮಹತ್ವದ ಪರೀಕ್ಷೆಯಲ್ಲೊಂದಾದ ಯುಪಿಎಸ್ಸಿಯಲ್ಲಿ 808 ನೇ ಸ್ಥಾನದ ಸಾಧನೆ ಮಹತ್ವದ್ದು' ಎಂದಿದ್ದಾರೆ.

English summary
Bagalkot: Meet Kishore Bhattad, son of small grocery shop owner Badrinarayana bhattad and Umadevi cracked the UPSC exam by securing 808th rank.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X