ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಲೋಕಾಯುಕ್ತ ಉಳಿಸಿ' ಆಮ್ ಆದ್ಮಿ ವೀಲ್ ಚೇರ್ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಏಪ್ರಿಲ್, 06: ಲೋಕಾಯುಕ್ತ ನಿರ್ಮೂಲನೆ ಮಾಡಿ , ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆ ಮಾಡಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಿತು.

ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಕಾರ್ಯಕರ್ತರು ವೀಲ್ ಚೇರ್ ನಲ್ಲಿ ವಿಧಾನಸೌಧ ಮತ್ತು ಸಿಎಂ ಕಚೇರಿ ಕಡೆ ಮುನುಗ್ಗಲು ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಪೊಲೀಸರೊಂದಿಗಿನ ಚಕಮಕಿಯಲ್ಲಿ ಕಾರ್ಯಕರ್ತರಿಗೆ ಗಾಯಗಳಾದವು.

aap

ಲೋಕಾಯುಕ್ತ ಉಳಿಸಿ ಎಂದು ಹೋರಾಟ ಮಾಡುತ್ತಿದ್ದ ಕಾರ್ಯಕರ್ತರಿಗೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬೆಂಬಲ ನೀಡಿದ್ದರು.[ದೆಹಲಿಯಲ್ಲಿ ಎಸ್ ಎಂ ಕೃಷ್ಣ 'ಪಾಂಚಜನ್ಯ', ಅಡಕತ್ತರಿಯಲ್ಲಿ ಸಿದ್ದು]

ಭಾರತ ದೇಶದಲ್ಲೇ ಅತ್ಯಂತ ಶಕ್ತಿಶಾಲಿ ಭ್ರಷ್ಟಾಚಾರ ವಿರೋಧಿ ಹಾಗೂ ನಿಗ್ರಹ ಸಂಸ್ಥೆಯಾಗಿದ್ದ ಕರ್ನಾಟಕ ಲೋಕಾಯುಕ್ತವನ್ನು ಸಂಪೂರ್ಣವಾಗಿ ಮುಗಿಸಿ, ಇಡೀ ರಾಜ್ಯದಲ್ಲಿ ಭ್ರಷ್ಟರ ವಿರುದ್ಧ ಧ್ವನಿ ಎತ್ತದಂತೆ ಮಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ನಮ್ಮ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಲೋಕಾಯುಕ್ತವನ್ನು ಬಲಪಡಿಸಿ, ಲೋಕಾಯುಕ್ತ ಸ್ಥಾನಕ್ಕೆ ಪ್ರಾಮಾಣಿಕರನ್ನು ನೇಮಿಸಲು ಜನರು ನಡೆಸುತ್ತಿರುವ ಹೋರಾಟವನ್ನು ಮುಗಿಸಿಹಾಕಲು, ಇಡೀ ಲೋಕಾಯುಕ್ತ ಸಂಸ್ಥೆಯನ್ನೇ ಹಲ್ಲಿಲ್ಲದ ಹಾವಿನ ಹಾಗೆ ಮಾಡಲು ಮುಂದಾಗಿರುವುದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು. ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮತ್ತು ಪೊಲೀಸರೊಂದಿಗಿನ ಚಕಮಕಿಯ ಫೋಟೋಗಳು ಇಲ್ಲಿವೆ.

English summary
Bengaluru: Karnataka Aam Admi Party has lambasted Congress party for making an attempt to dismantle Lokayukta and for establishing Anti-Corruption Bureau. AAP-Karnataka has urged people of state to support their fight against closing Lokayukta. On 6 April Aam Admi Party members trying to siege CM Siddaramaiah office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X