15 ಕ್ಷೇತ್ರದ ಉಪ ಚುನಾವಣೆ; ಸಿದ್ದರಾಮಯ್ಯ ಟಾರ್ಗೆಟ್ 10 ಕ್ಷೇತ್ರ
ಬೆಂಗಳೂರು, ಅಕ್ಟೋಬರ್ 13 : ವಿಧಾನಸಭೆ ಅಧಿವೇಶನದ ಬಳಿಕ ಕಾಂಗ್ರೆಸ್ ಉಪ ಚುನಾವಣೆಯತ್ತ ಗಮನ ಹರಿಸಿದೆ. 15 ಕ್ಷೇತ್ರದ ಉಪ ಚುನಾವಣೆ ಡಿಸೆಂಬರ್ 5ರಂದು ನಡೆಯಲಿದ್ದು, ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಸಿದ್ದರಾಮಯ್ಯ ತಂತ್ರ ರೂಪಿಸುತ್ತಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ಕಾಂಗ್ರೆಸ್ ನಾಯಕರು ಮತ್ತು 15 ಕ್ಷೇತ್ರಗಳ ಉಪ ಚುನಾವಣೆ ವೀಕ್ಷಕರ ಜೊತೆ ಸಭೆ ನಡೆಸಿದರು. ಎಲ್ಲಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಸಿದ್ಧತೆ ಕುರಿತು ಮಾಹಿತಿಯನ್ನು ಪಡೆದುಕೊಂಡರು.
"ಕಾಂಗ್ರೆಸ್ ಸೇರಿದ್ದ ಆರ್. ಶಂಕರ್ ಸೇರಿದಂತೆ 14 ಜನ ಪಕ್ಷಕ್ಕೆ ಹಾಗೂ ನಮ್ಮ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ದ್ರೋಹ ಬಗೆದಿದ್ದಾರೆ. ಅಧಿಕಾರದ ವ್ಯಾಮೋಹದಿಂದ ಪಕ್ಷ ತೊರೆದು ಮೋಸ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಅವರಿಗೆಲ್ಲ ಪಾಠ ಕಲಿಸಬೇಕು" ಎಂದು ಸಿದ್ದರಾಮಯ್ಯ ಕರೆ ನೀಡಿದರು.
"ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿವೆ. ಭಿನ್ನಮತ ಮರೆತು ಒಗ್ಗಟ್ಟಾಗಿ ಎಲ್ಲರೂ ಉಪ ಚುನಾವಣೆ ಎದುರಿಸಿ, 10 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡಿ" ಎಂದು ಸಿದ್ದರಾಮಯ್ಯ ಹೇಳಿದರು.

ಅಭ್ಯರ್ಥಿ ಆಯ್ಕೆ ಯಾವಾಗ?
ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 15ರಂದು ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ನಾಯಕರು ಸಭೆ ನಡೆಸಲಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಅ.15ರಂದು ಬೆಂಗಳೂರಿಗೆ ಬರಲಿದ್ದಾರೆ. ಅಂದು ಉಪ ಚುನಾವಣೆ ವೀಕ್ಷಕರ ಜೊತೆ ಮತ್ತೊಮ್ಮೆ ಸಭೆ ನಡೆಸುವ ಸಾಧ್ಯತೆ ಇದೆ.

ಸಮಾವೇಶ, ಪ್ರಚಾರ
ಈಗಾಗಲೇ ಹೊಸಕೋಟೆ ಕ್ಷೇತ್ರದಲ್ಲಿ ಸಮಾವೇಶ ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ ನೀಡಲಾಗಿದೆ. ಹೊಸಕೋಟೆ ಕ್ಷೇತ್ರದಲ್ಲಿ ಪದ್ಮಾವತಿ ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದು, ಪ್ರಚಾರವನ್ನು ಆರಂಭಿಸಿದ್ದಾರೆ.

10 ಕ್ಷೇತ್ರಗಳು ಯಾವುವು?
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೊಸಕೋಟೆ, ಗೋಕಾಕ್, ಹುಣಸೂರು, ಕೆ. ಆರ್. ಪುರ, ಯಶವಂತಪುರ, ವಿಜಯನಗರ, ಮಹಾಲಕ್ಷ್ಮೀ ಲೇಔಟ್, ಹಿರೇಕೆರೂರು, ಕಾಗವಾಡ ಮತ್ತು ಕೆ. ಆರ್. ಪೇಟೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ.

ಬಿಜೆಪಿಗೆ ಬಂಡಾಯದ ಚಿಂತೆ
ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಲು ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಚುನಾವಣೆಯಲ್ಲಿ ಸೋತ ಬಿಜೆಪಿ ನಾಯಕರು ಟಿಕೆಟ್ಗಾಗಿ ಪಟ್ಟು ಹಿಡಿದಿದ್ದಾರೆ. ಯಡಿಯೂರಪ್ಪ ಬಂಡಾಯ ಶಮನಗೊಳಿಸಲಿದ್ದಾರೆಯೇ? ಕಾದು ನೋಡಬೇಕು.
-
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?












Click it and Unblock the Notifications