ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ವಪಕ್ಷ ಸಭೆಗೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ!

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಸೆ. 21: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಲು ಸರ್ವಪಕ್ಷದ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಬುಧವಾರ ಸಂಜೆ 5 ಗಂಟೆಗೆ ಕರೆದಿರುವ ಸಭೆಗೆ ಹಾಜರಾಗದಿರಲು ಬಿಜೆಪಿ ನಿರ್ಧರಿಸಿದೆ. ಜೆಡಿಎಸ್ ಸದಸ್ಯರು ಹಾಜರಾಗುವುದು ಅನುಮಾನವಾಗಿದೆ.[ಸೆ.21ರಿಂದ 27ರವರೆಗೂ ಪ್ರತಿದಿನ 6,000 ಕ್ಯೂಸೆಕ್ಸ್ ನೀರು ಹರಿಸಿ]

ಸಿದ್ದರಾಮಯ್ಯ ಅವರು ಕರೆದಿರುವ ಸರ್ವಪಕ್ಷಸಭೆ ಅನಗತ್ಯ, ನಾವು ವಿಶೇಷ ಅಧಿವೇಶನ ಕರೆಯುವಂತೆ ಕೋರಿದ್ದೇವೆ. ಅದಕ್ಕೆ ಬೆಲೆ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. [ನೀರಿನ ಸಮಸ್ಯೆಗೆ 'ದಿವ್ಯ' ಉಪಾಯ ನೀಡಿದ ರಮ್ಯಾ]

Cauvery- BJP to boycott all party meet, JD(S) reps to resign

ಪೂರ್ವನಿಗದಿತ ಕಾರ್ಯಕ್ರಮದಂತೆ ಯಡಿಯೂರಪ್ಪ ಅವರು ಕಡೂರು ಪ್ರವಾಸ ಕೈಗೊಂಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಬಿಜೆಪಿ ಅಂದಿನಿಂದ ಹೇಳುತ್ತಾ ಬಂದಿದೆ ಆದರೆ, ಈ ಬಗ್ಗೆ ಸಿದ್ದರಾಮಯ್ಯ ದೃಢ ನಿರ್ಧಾರ ಕೈಗೊಂಡಿಲ್ಲ ಏಕೆ? ಎಂದು ಬಿಎಸ್ ವೈ ಪ್ರಶ್ನಿಸಿದ್ದಾರೆ.[ಕರ್ನಾಟಕಕ್ಕೆ ಮರಣಶಾಸನ : ಸಿದ್ದರಾಮಯ್ಯ]

ಜೆಡಿಎಸ್ ಕೂಡಾ ಅನುಮಾನ: ಜೆಡಿಎಸ್ ಸಂಸದ ಎಂಎಸ್ ಪುಟ್ಟರಾಜು ಅವರು ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಮಂಡ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು, ಸಂಸದರು, ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

English summary
There is hectic activity in Karnataka following the verdict of the Supreme Court which directed the release of Cauvery Water to Tamil Nadu. While on one hand the BJP has decided to boycott the all party meeting called by CM Siddaramaiah on the other the JD(S) representatives have decided to resign
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X