ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ರೈತರ ಹಣೆಬರಹ ಸುಪ್ರೀಂನಲ್ಲಿ ನಿರ್ಧಾರ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಸೆಪ್ಟೆಂಬರ್, 05: ಕರ್ನಾಟಕದಿಂದ ಕಾವೇರಿ ನೀರು ಕೇಳಿರುವ ತಮಿಳುನಾಡಿನ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದ್ದು ಕರ್ನಾಟಕದ ರೈತರ ಹಣೆಬರಹ ನಿರ್ಧಾರವಾಗಲಿದೆ.

ಕಾವೇರಿ ಪಾತ್ರದಿಂದ 50.52 ಟಿಎಂಸಿ ನೀರು ನೀಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಯಲಿದ್ದು ಕರ್ನಾಟಕ ಸಹ ವಾದ ಮಂಡನೆಗೆ ಸಿದ್ಧತೆ ಮಾಡಿಕೊಂಡಿದೆ.[ತಮಿಳ್ನಾಡಿಗೆ ಕಾವೇರಿ ಬಿಡಲೇಬೇಕು]

supreme court

ಒನ್ ಇಂಡಿಯಾದ ಜತೆ ಮಾತನಾಡಿರುವ ಕರ್ನಾಟಕದ ಪರ ವಕೀಲ ಮೋಹನ್ ಕಟರ್ಕಿ, ತಮಿಳುನಾಡಿನಲ್ಲಿ ಈ ಬಾರಿ ಸಾಕಷ್ಟು ಮಳೆಯಾಗಿದೆ. ಮಳೆ ಕೊರತೆ ತಮಿಳುನಾಡನ್ನು ಕಾಡಿಲ್ಲ. ನಮ್ಮ ಬಳಿ ಹೊರ ರಾಜ್ಯಕ್ಕೆ ಬಿಡುವಷ್ಟು ನೀರು ಇಲ್ಲ. ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.[ನಮಗೇ ನೀರಿಲ್ಲ, ಇನ್ನು ತಮಿಳ್ನಾಡಿಗೆ ಎಲ್ಲಿಂದ ಬಿಡೋಣ?]

ಕರ್ನಾಟಕ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಸಂಪೂರ್ಣ ವಿವರವನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು. ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಟರ್ಕಿ ತಿಳಿಸಿದ್ದಾರೆ.

ಕಾವೇರಿ ನೀರು ಬಿಡುಗಡೆ ಸಂಬಂಧದ ತೀರ್ಪು ಹೊರಬೀಳಲಿರುವುದರಿಂದ ಮಂಡ್ಯ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆ ಆರ್ ಎಸ್ ಬಳಿಯೂ ಪೊಲೀಸರನ್ನು ನಿಯೋಜಿಸಲಾಗಿದೆ.

English summary
All eyes would be on the Supreme Court which will today take up the Cauvery Waters matter between Tamil Nadu and Karnataka. Tamil Nadu has sought for the release of 60 TMC of water and Karnataka has said it cannot release that much. The counsel for Karnataka, Mohan Katarki tells OneIndia that Tamil Nadu is under the impression that this is not a distress year. We have no more water to spare is what we will tell the Supreme Court which had on the last date of hearing told Karnataka to live and let live.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X