Get Updates
Get notified of breaking news, exclusive insights, and must-see stories!

ರಾಜ್ಯಕ್ಕೆ 450 ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

ರಾಜ್ಯ ಕೇಳಿದ್ದ 4703 ಕೋಟಿ ರು. ಮೊತ್ತದಲ್ಲಿ 1782 ಕೋಟಿ ರು. ಮಾತ್ರ ಮಂಜೂರು ಮಾಡಿದ್ದ ಕೇಂದ್ರ ಸರ್ಕಾರ, ಈವರೆಗೆ ಯಾವುದೇ ಹಣ ಬಿಡುಗಡೆ ಮಾಡಿರಲಿಲ್ಲ.

ನವದೆಹಲಿ, ಫೆಬ್ರವರಿ 9: ಮುಂಗಾರು ಮಳೆ ವೈಫಲ್ಯದಿಂದಾದ ಬೆಳೆ ನಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ 450 ಕೋಟಿ ರು. ಹಣವನ್ನು ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರವು ಬರ ಪರಿಹಾರಕ್ಕಾಗಿ 4703 ಕೋಟಿ ರು. ನೆರವು ಕೋರಿತ್ತು. ಆದರೆ, ಕೇಂದ್ರ ಸರ್ಕಾರ 1782 ಕೋಟಿ ರು. ಮೊತ್ತಕ್ಕೆ ಮಂಜೂರಾತಿ ನೀಡಿತ್ತು. ಆದರೆ, ಆ ಹಣವೂ ಬಿಡುಗಡೆಯಾಗಿರಲಿಲ್ಲ.[ಬರ ಪರಿಹಾರ: ಕೇಂದ್ರದಿಂದ ರು 4703 ಕೋಟಿ ನೆರವು ಬೇಡಿದ ಸಿಎಂ]

Cetre releases Rs. 450 Cr. as drought relife fund to Karnataka

ಈ ಹಿನ್ನೆಲೆಯಲ್ಲಿ ಚಾಮರಾಜ ನಗರದ ಕಾಂಗ್ರೆಸ್ ಸಂಸದ ಧ್ರುವ ನಾರಾಯಣ್ ಲೋಕಸಭೆಯಲ್ಲಿ ಗುರುವಾರ ಈ ಬಗ್ಗೆ ದನಿಯೆತ್ತಿದ್ದರು. ಇದಕ್ಕೆ ಉತ್ತರ ನೀಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಲ್ಲಿ (ಎನ್ ಡಿಆರ್ ಎಫ್) ಹಣ ಇಲ್ಲದಿರುವುದರಿಂದ ವಿಳಂಬವಾಗಿದೆ ಎಂದು ತಿಳಿಸಿದರಲ್ಲದೆ, ಬೇರೆ ನಿಧಿಯಿಂದ ಎನ್ ಡಿಆರ್ ಎಫ್ ಗೆ ಹಣ ವರ್ಗಾಯಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.

ಅರುಣ್ ಜೇಟ್ಲಿಯವರ ಆಶ್ವಾಸನೆ ಮೇರೆಗೆ ಗುರುವಾರ ಸಂಜೆ ವೇಳೆಗೆ ಹಣ ಬಿಡುಗಡೆಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+