ಬಾಗೇಪಲ್ಲಿಯಿಂದ ಧಾವಿಸಿ ಬಂದ ರೈತ ಪಡೆಗೆ ದೇವನಹಳ್ಳಿಯಲ್ಲಿ ತಡೆ
ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಪಡೆ ಬಾಗೇಪಲ್ಲಿಯಿಂದ ಬೆಂಗಳೂರಿಗೆ ಬರುತ್ತಿದೆ.
ಬಾಗೇಪಲ್ಲಿ, ಜೂನ್ 01: ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರು ಮುಂದಾಗಿದ್ದನ್ನು ವ್ಯವಸ್ಥಿತವಾಗಿ ವಿಫಲಗೊಳಿಸಲಾಗಿದೆ.
ಸಂಜೆ ವೇಳೆಯ ಅಪ್ಡೇಟ್:
ರಾಜ್ಯದ ವಿವಿಧೆಡೆಯಿಂದ ಬರಲಿರುವ ರೈತ ಸಮೂಹ ಗುರುವಾರ(ಜೂನ್ 01) ಮಧ್ಯಾಹ್ನದ ವೇಳೆಗೆ ಬೆಂಗಳೂರು ತಲುಪುವ ನಿರೀಕ್ಷೆಯಿತ್ತು. ಆದರೆ, ಪ್ರತಿಭಟನೆಗಾಗಿ ಬರುವ ರೈತರಿಗೆ ಪ್ರವೇಶ ನಿರಾಕರಿಸಿದ್ದರಿಂದ ರೈತಪಡೆಯನ್ನು ದೇವನಹಳ್ಳಿಯಲ್ಲೇ ತಡೆಹಿಡಿಯಲಾಯಿತು.
'ನಾವೇನು ಕಲ್ಲು ಹೊಡೆಯಲ್ಲ, ಬೆಂಕಿ ಹಚ್ಚಲ್ಲ, ನ್ಯಾಯ ಕೇಳಲು ವಿಧಾನಸೌಧದತ್ತ ಹೋಗುತ್ತಿದ್ದೇವೆ. ಅದಕ್ಕೂ ಆಸ್ಪದ ನೀಡುತ್ತಿಲ್ಲವೇಕೆ?' ಎಂದು ರೈತಮುಖಂಡ ಕೋಡಿ ಹಳ್ಳಿ ಚಂದ್ರಶೇಖರ್ ಗರಂ ಆಗಿ ಪೊಲೀಸರನ್ನು ಪ್ರಶ್ನಿಸಿದರು.
ದೇವನಹಳ್ಳಿಯ ರಾಣಿವೃತ್ತಕ್ಕೆ ಆಗಮಿಸಿದ ಕೃಷಿ ಸಚಿವ ಕೃಷ್ಣಬೈರೇಗೌಡ ಅವರು, ರೈತರ ಸಮಸ್ಯೆ ಪರಿಹರಿಸುವ ಆಶ್ವಾಸನೆ ನೀಡಿದರು.
ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಇದೇ ಸಮಸ್ಯೆ ಮುಂದಿಟ್ಟುಕೊಂಡು ರಾಜಧಾನಿ ಪ್ರವೇಶಿಸಿದ ರೈತರನ್ನು ಮೇಖ್ರಿ ವೃತ್ತದ ಬಳಿ ತಡೆದ ಪೊಲೀಸರು, ಲಾಠಿ ರುಚಿ ತೋರಿಸಿದ್ದರು.[ಕುಡಿಯುವ ನೀರು ಕೇಳಿದ ರೈತರಿಗೆ ಪೊಲೀಸರ ಲಾಠಿ ಏಟು]
ಬೆಳಗ್ಗಿನ ಅಪ್ಡೇಟ್ಸ್:
* ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಪಡೆ ಬಾಗೇಪಲ್ಲಿಯಿಂದ ಬೆಂಗಳೂರಿಗೆ ಬರುತ್ತಿದೆ.
* ಕರ್ನಾಟಕ ರಾಜ್ಯ ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಹಾಗೂ ಹಸಿರು ಸೇನೆ ವತಿಯಿಂದ ವಿಧಾನ ಸಭೆ ಮುತ್ತಿಗೆ ಕಾರ್ಯಕ್ರಮ.

* ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜೂನ್ 1ರ ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ : ರೈತ ಸಂಘದ ಮುಖಂಡ ಶಿವಾನಂದಪ್ಪ.
* ಶಿವಮೊಗ್ಗದಿಂದ ಕೋಟೆಹಾಳ್ ಮಂಜುನಾಥ್, ಕುಂದೂರು ರೇವಣಸಿದ್ದಪ್ಪ ನೇತೃತ್ವದ ರೈತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ವಿವಿಧ ಬೇಡಿಕೆಗಳು: ಬೆಳೆಗಳಿಗೆ ನಿರ್ದಿಷ್ಟ ಬೆಲೆ, ಬರ ಪರಿಹಾರ, ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳ ಸದ್ಯದ ಪರಿಸ್ಥಿತಿ ಎಲ್ಲದಕ್ಕೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ ಮತ್ತು ಕೋಲಾರದ ಜಿಲ್ಲೆ ಜನರಿಗೆ ಶಾಶ್ವತವಾಗಿ ನೀರು ನೀಡುವವರೆಗೂ ಹೋರಾಟ ನಿಲ್ಲಲ್ಲ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications