ನವೆಂಬರ್ 5ರಿಂದ ಹಾಸನಾಂಬೆ ದರ್ಶನ ಪಡೆಯಿರಿ
ಹಾಸನ, ಸೆಪ್ಟೆಂಬರ್ 26 : ಪುರಾಣ ಪ್ರಸಿದ್ಧ ಹಾಸನಾಂಬೆ ದೇವಾಲಯ ನ.5 ರಿಂದ 13ರ ವರೆಗೆ 9 ದಿನಗಳ ಕಾಲ ತೆರೆದಿರುತ್ತದೆ. ದೇವಾಲಯಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಅಗತ್ಯವಿರುವ ಮೂಲ ಸೌಕರ್ಯವನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ. ಪ್ರತಿ ಸಂವತ್ಸರದ ಅಶ್ವಯುಜ ಮಾಸದ ಹುಣ್ಣಿಮೆಯ ನಂತರದ ಗುರುವಾರ ದೇವಿಯ ಗರ್ಭಗುಡಿಯನ್ನು ತೆರೆಯಲಾಗುತ್ತದೆ. ಈ ಬಾರಿ ನ.5ರಂದು ದೇವಾಲಯವನ್ನು ತೆರೆಯಲಾಗುತ್ತದೆ 13ರ ತನಕ ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿದೆ.

ಹಾಸನ ಜಿಲ್ಲಾಧಿಕಾರಿ ಉಮೇಶ್ ಎಚ್.ಕುಸುಗಲ್ ಅವರ ನೇತೃತ್ವದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು, ದೇವಾಲಯದ ಆಡಳಿತ ಮಂಡಳಿ ಸದಸ್ಯರು ಸಭೆ ಸೇರಿ ದೇವಾಲಯ ತೆರೆಯುವ ಬಗ್ಗೆ ತೀರ್ಮಾನ ಕೈಗೊಂಡಿದ್ದು, ದಿನಾಂಕ ಘೋಷಣೆ ಮಾಡಿದ್ದಾರೆ. [ಹಾಸಬಾಂಬೆ ಸ್ಥಳ ಪುರಾಣ ಓದಿ]
ಹಾಸನಾಂಬ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗಾಗಿ ಸರ್ಕಾರ 2 ಕೋಟಿ ರೂ.ಗಳನ್ನು ಘೋಷಣೆ ಮಾಡಿದೆ. 70 ಲಕ್ಷ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ರಾಜಗೋಪುರ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.
250 ರೂ. ಟಿಕೆಟ್ : ದೇವಾಲಯದ ಆಡಳಿತ ಮಂಡಳಿ ವಿಶೇಷ ದರ್ಶನಕ್ಕಾಗಿ 250 ರೂ.ಗಳ ಟಿಕೆಟ್ ವ್ಯವಸ್ಥೆ ಮಾಡಿದೆ. ಟಿಕೆಟ್ ಪಡೆದವರನ್ನು ದೇವಿಯ ದರ್ಶನಕ್ಕೆ ವಿಶೇಷ ಕ್ಯೂನಲ್ಲಿ ಕಳುಹಿಸಿಕೊಡಲಾಗುತ್ತದೆ.
ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ. 2012ರಲ್ಲಿ 15 ದಿನ, 2013ರಲ್ಲಿ 13 ದಿನ, 2014ರಲ್ಲಿ 8 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆಯಲು ಆಗಮಿಸುತ್ತಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications