ಮೂವರು ಎಂಎಲ್ಸಿ ಮನೆಗಳ ಮೇಲೆ ಐಟಿ ದಾಳಿ
ಬೆಂಗಳೂರು, ಮಾರ್ಚ್ 15 : ಕರ್ನಾಟಕದ ಮೂವರು ವಿಧಾನಪರಿಷತ್ ಸದಸ್ಯರ ಮನೆ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನಲ್ಲಿರುವ ವಿಧಾನಪರಿಷತ್ ಸದಸ್ಯರಾದ ಸಿ.ಆರ್.ಮನೋಹರ್ (ಜೆಡಿಎಸ್), ಕೆ.ಗೋವಿಂದರಾಜು (ಕಾಂಗ್ರೆಸ್), ಡಿ.ಯು ಮಲ್ಲಿಕಾರ್ಜುನ (ಪಕ್ಷೇತರ) ಅವರ ನಿವಾಸದ ಮೇಲೆ ಮಂಗಳವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. [ವಿಧಾನಪರಿಷತ್ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?]
ಸರ್ಜಾಪುರದಲ್ಲಿರುವ ಸಿ.ಆರ್.ಮನೋಹರ್ ಅವರ ನಿವಾಸ, ಇಂದಿರಾನಗರದಲ್ಲಿರುವ ಕೆ.ಗೋವಿಂದರಾಜು ಅವರ ನಿವಾಸ ಮತ್ತು ಡಾಲರ್ಸ್ ಕಾಲೋನಿಯಲ್ಲಿರುವ ಡಿ.ಯು.ಮಲ್ಲಿಕಾರ್ಜುನ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. [ಬಜೆಟ್ 2016: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕವೇನು?]
ಕೆ.ಗೋವಿಂದರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಸದೀಯ ಕಾರ್ಯದರ್ಶಿಗಳಾಗಿದ್ದಾರೆ. ಸಿ.ಆರ್.ಮನೋಹರ್ ಅವರು ಸುದೀಪ್ ಮತ್ತು ಶಿವರಾಜ್ ಕುಮಾರ್ ಒಟ್ಟಾಗಿ ನಟಿಸುತ್ತಿರುವ ಜೋಗಿ ಪ್ರೇಮ್ ನಿರ್ದೇಶನದ 'ಕಲಿ' ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.