ಕಲ್ಲಪ್ಪ ಹಂಡಿಬಾಗ್ ಪ್ರಕರಣ: ಪ್ರವೀಣ್ ಖಾಂಡ್ಯಗೆ ಜಾಮೀನು
ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ ಖಾಂಡ್ಯಗೆ ಹೈಕೋರ್ಟಿನಿಂಡ ಶುಕ್ರವಾರ(ಡಿಸೆಂಬರ್ 16)ದಂದು ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಬೆಂಗಳೂರು, ಡಿಸೆಂಬರ್ 16: ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ ಖಾಂಡ್ಯಗೆ ಹೈಕೋರ್ಟಿನಿಂಡ ಶುಕ್ರವಾರ(ಡಿಸೆಂಬರ್ 16)ದಂದು ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಜುಲೈ 5ರಂದು ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಹಿಂದೂ ಪರ ಸಂಘಟನೆಯ ಮುಖಂಡ ಪ್ರವೀಣ್ ಖಾಂಡ್ಯನಿಗಾಗಿ ಸಿಐಡಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. [ಕಲ್ಲಪ್ಪ ಪ್ರಕರಣದಲ್ಲಿ ಕಿಡ್ನಾಪ್ ಆಗಿದ್ದ ತೇಜಸ್ ಹೇಳಿದ್ದೇನು?]
ಈ ನಡುವೆ ಚಿಕ್ಕಮಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದಲ್ಲಿ ಖಾಂಡ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಹೀಗಾಗಿ ಹೈಕೋರ್ಟ್ ಮೇಟ್ಟಿಲೇರಿದ್ದ ಖಾಂಡ್ಯಗೆ ಶುಕ್ರವಾರ ಶುಭ ಸುದ್ದಿ ಸಿಕ್ಕಿದೆ. [ಕಲ್ಲಪ್ಪ ಸಾವಿಗೆ ಕಿರುಕುಳ ಕಾರಣವಲ್ : ಎಸ್ಪಿ ಸಂತೋಷ್]
ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5ರಂದು ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಸಿಐಡಿ, ವಿಚಾರಣೆ ನಡೆಸಿದೆ. (ಒನ್ಇಂಡಿಯಾ ಸುದ್ದಿ)