ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ವಿವಾದ : ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 06 : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಒಕ್ಕೂಟ ಕರೆ ನೀಡಿದೆ.

ಸುಪ್ರೀಂಕೋರ್ಟ್ ತಮಿಳುನಾಡಿಗೆ ಪ್ರತಿದಿನ 15,000 ಕ್ಯೂಸೆಕ್ ನೀರು ಹರಿಸಬೇಕು ಎಂದು ಸೋಮವಾರ ಆದೇಶ ನೀಡಿದೆ. ಈ ಆದೇಶ ಹೊರಬಿದ್ದ ಬಳಿಕ ಮಂಡ್ಯ, ಶ್ರೀರಂಗಪಟ್ಟಣ, ಬೆಳಗೋಳ, ಕೆಆರ್‍ಎಸ್ ಬಳಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.[ತಮಿಳುನಾಡಿಗೆ ನೀರು ಹರಿಸಿ ಎಂದ ಸುಪ್ರೀಂ]

vatal nagaraj

ಬೆಂಗಳೂರಿನಲ್ಲಿಯೂ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತಿವೆ.[ಕಾವೇರಿ ತೀರ್ಪು: ರಾಜ್ಯ ಸರ್ಕಾರ ರೈತರ ಕ್ಷಮೆ ಕೇಳಲಿ]

ವಾಟಾಳ್‌ರಿಂದ ರಸ್ತೆ ತಡೆ : ಸೋಮವಾರ ಸಂಜೆ ರಿಚ್ಮಂಡ್‌ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕನ್ನಡ ಒಕ್ಕೂಟದ ಮುಖ್ಯಸ್ಥ ವಾಟಾಳ್ ನಾಗರಾಜ್ ಅವರು ಸೆಪ್ಟೆಂಬರ್ 9ರಂದು (ಶುಕ್ರವಾರ) ಕರ್ನಾಟಕ ಬಂದ್ ನಡೆಸುವುದಾಗಿ ಹೇಳಿದರು.[ಸುಪ್ರೀಂಗೆ ರಾಜ್ಯದ ಸ್ಥಿತಿ ಮನವರಿಕೆ, ತಮಿಳುನಾಡಿಗೆ ನೀರು ಬಿಡಲ್ಲ]

'ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿ ಜೈಲಿಗೆ ಹೋಗಲು ನಾವು ಸಿದ್ಧರಿದ್ದೇವೆ. ಆದರೆ, ತಮಿಳುನಾಡಿಗೆ ನೀರು ಹರಿಯಲು ಬಿಡುವುದಿಲ್ಲ. ಕರ್ನಾಟಕ ಬಂದ್‌ಗೆ ರಾಜ್ಯದ ಎಲ್ಲಾ ಜನರು ಬೆಂಬಲ ನೀಡಬೇಕು' ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.

English summary
Kannada Okkoota has called a Karnataka bandh on Friday September 9, 2016 to protest against Supreme Court order. The Supreme Court on Monday ordered Karnataka to release 15,000 cusecs of Cauvery water to Tamil Nadu for ten days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X