ದೇಶದ ಸಮಗ್ರ ಅಭಿವೃದ್ಧಿಗೆ ಡಿಜಿಟಲ್ ಇಂಡಿಯಾ: ವಾಲಾ
ಬೆಂಗಳೂರು, ಜನವರಿ, 26: ರಾಜ್ಯದಲ್ಲೂ 67ನೇ ಗಣರಾಜ್ಯೋತ್ಸವ ಸಂಭ್ರಮ. ಬೆಂಗಳೂರಿನಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಧ್ವಜಾರೋಹಣ ಮಾಡುವ ಮೂಲಕ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾಲಾ ಧ್ವಜಾರೋಹಣ ನೆರವೇರಿಸಿ, ಸೈನಿಕರಿಂದ ಗೌರವ ಸ್ವೀಕರಿಸಿದರು. ದೇಶದ ಸಮಸ್ತ ಜನತೆಗೆ ಶುಭಾಶಯ ಹಂಚಿಕೊಂಡರು.[ನವದೆಹಲಿಯಲ್ಲಿ 67ನೇ ಗಣರಾಜ್ಯೋತ್ಸವ ಸಂಭ್ರಮ]
ಡಿಜಿಟಲ್ ಇಂಡಿಯಾ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಸಾದ್ಯವಿದೆ. ಜನರ ಬಳಿಗೆ ಆಡಳಿತ ಸಾಗುತ್ತಿದ್ದು ಇನ್ನಷ್ಟು ಹತ್ತಿರವಾಗಬೇಕು ಎಂದು ಹೇಳಿದರು. ದೇಶಕ್ಕಾಗಿ ಬಲಿದಾನ ಮಾಡಿದವರಿಗೆ ನಮನ ಸಲ್ಲಿಸುವುದು ಪ್ರತಿಯೊಬ್ಬನ ಕರ್ತವ್ಯ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ಸೇರಿದಂತೆ ಮಂತ್ರಿ ಮಂಡಳದ ಅನೇಕರು ಹಾಜರಿದ್ದರು.
ಬೆಂಗಳೂರು ಪೊಲೀಸರು ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾಗವಹಿಸಿದ್ದರು. ಪೊಲೀಸ್ ಆಯುಕ್ತ ಮೆಘರಿಖ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಸಿಬ್ಬಂದಿಯಿಂದ ಗೌರವ ವಂದನೆ ಸ್ವೀಕರಿಸಿದರು.