ಪ್ರತ್ಯೇಕ ರಾಜ್ಯ ಕೇಳಿದ ಪಾಟೀಲರಿಗೆ ಶೋಕಾಸ್ ನೋಟಿಸ್
ಬೆಂಗಳೂರು, ಏ.9 : ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಿ ಎಂಬ ಬೇಡಿಕೆ ಮುಂದಿಟ್ಟಿದ್ದ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ಅವರಿಗೆ ಪಕ್ಷ ಶೋಕಾಸ್ ನೋಟಿಸ್ ನೀಡಿದೆ. ತಕ್ಷಣ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಸೂಚಿಸಿದೆ.
ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರ
ನಿರ್ದೇಶದ
ಮೇರೆಗೆ
ಶಾಸಕಾಂಗ
ಪಕ್ಷದ
ಕಾರ್ಯದರ್ಶಿ
ಅಪ್ಪಾಜಿ
ನಾಡಗೌಡ
ಅವರು
ಎ.ಎಸ್.ಪಾಟೀಲರಿಗೆ
ಶೋಕಾಸ್
ನೋಟಿಸ್
ಜಾರಿಗೊಳಿಸಿದ್ದು,
ಒಂದು
ವಾರದಲ್ಲಿ
ಉತ್ತರ
ನೀಡುವಂತೆ
ತಿಳಿಸಿದ್ದಾರೆ.
[ಉತ್ತರ
ಕರ್ನಾಟಕ
ಪತ್ಯೇಕ
ರಾಜ್ಯ,
ಇದು
ಕತ್ತಿ
ಬೇಡಿಕೆಯಲ್ಲ!]
ನಿಮ್ಮ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ. ಆದ್ದರಿಂದ, ಹೇಳಿಕೆಯನ್ನು ವಾಪಸ್ ಪಡೆದು, ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಶೋಕಾಸ್ ನೋಟಿಸ್ಗೆ ಒಂದು ವಾರದಲ್ಲಿ ಉತ್ತರ ನೀಡಬೇಕು ಎಂದು ಪಕ್ಷ ಸೂಚನೆ ನೀಡಿದೆ.[ಮತ್ತೆ ಕರ್ನಾಟಕ ಒಡೆಯುವ ಮಾತನಾಡಿದ ಕತ್ತಿ]
ಶಿಸ್ತು ಕ್ರಮ ಎಚ್ಚರಿಕೆ : ಪ್ರತ್ಯೇಕ ರಾಜ್ಯ ರಚನೆ ವಿಚಾರ ಅಪ್ರಸ್ತುತ ಹಾಗೂ ಖಂಡನೀಯವೆಂದು ಹೇಳಿದ್ದು, ರಾಜ್ಯ ಒಡೆಯುವ ಯಾವ ಮಾತಿಗೂ ಮನ್ನಣೆ ನೀಡುವುದಿಲ್ಲ ಎಂದು ನೋಟಿಸ್ನಲ್ಲಿ ಸ್ಪಷ್ಟಪಡಿಸಲಾಗಿದೆ.[ಪ್ರತ್ಯೇಕ ರಾಜ್ಯ, ಸಿದ್ದರಾಮಯ್ಯ ಹೇಳುವುದೇನು?]
ಹೇಳಿಕೆಯನ್ನು ಹಿಂಪಡೆದು, ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಪಕ್ಷ ನೀಡಿರುವ ನೋಟಿಸ್ಗೆ ಉತ್ತರ ನೀಡಬೇಕು. ಇಲ್ಲವಾದಲ್ಲಿ ತಮ್ಮ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಹೈಕಮಾಂಡ್ಗೆ ಶಿಫಾರಸು ಮಾಡುವುದಾಗಿ ನೋಟಿಸ್ನಲ್ಲಿ ಎಚ್ಚರಿಕೆ ನೀಡಲಾಗಿದೆ.
ವಿಜಯಪುರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎ.ಎಸ್.ಪಾಟೀಲ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿವೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದ್ದರು.
ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಿ ಎಂಬ ಬೇಡಿಕೆ ಮುಂದಿಟ್ಟಿದ್ದರು ಮತ್ತು ಈ ಕುರಿತು ಸಾಹಿತಿಗಳು, ಚಿಂತಕರು ಮುಂತಾದವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದರು.