ಜಯಾ ಅಕ್ರಮ ಆಸ್ತಿ ಕೇಸ್, ಸುಪ್ರೀಂಗೆ ಮೇಲ್ಮನವಿ
ಬೆಂಗಳೂರು, ಜೂ. 23 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಬುಧವಾರ
ಮೇಲ್ಮನವಿಯನ್ನು
ಸುಪ್ರೀಂಕೋರ್ಟ್ಗೆ
ಕರ್ನಾಟಕ
ಸರ್ಕಾರ
ಸಲ್ಲಿಕೆ
ಮಾಡಿದ್ದು,
ಜುಲೈ
ಮೊದಲನೇ
ವಾರದಲ್ಲಿ
ಮೂವರು
ನ್ಯಾಯಮೂರ್ತಿಗಳ
ಪೀಠದ
ಮುಂದೆ
ಮೇಲ್ಮನವಿ
ಅರ್ಜಿ
ವಿಚಾರಣೆಗೆ
ಬರುವ
ಸಾಧ್ಯತೆ
ಇದೆ.
[ಜಯಾ
ಪ್ರಕರಣ:
ಸರ್ಕಾರದಿಂದ
4
ಸಾವಿರ
ಪುಟಗಳ
ಅಪೀಲ್]
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಮತ್ತು ಇತರ ಮೂವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕರ್ನಾಟಕ ಸರ್ಕಾರ ಮೇಲ್ಮನವಿಯಲ್ಲಿ ಪ್ರಶ್ನಿಸಿದೆ. ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅವಕಾಶ ನೀಡಬಾರದು ಎಂದು ಕರ್ನಾಟಕ ಮನವಿ ಮಾಡಿದೆ. [ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!]
ಅರ್ಜಿಯಲ್ಲೇನಿದೆ? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತೀರ್ಪು ನೀಡುವಾಗ ಹೈಕೋರ್ಟ್ ಎಲ್ಲಾ ಅಂಶಗಳನ್ನು ಪರಿಗಣಿಸಿಲ್ಲ. ಖುಲಾಸೆಗೊಂಡ ನಂತರ ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಸರ್ಕಾರ ಹೇಳಿದೆ. [ಜಯಲಲಿತಾ ಘೋಷಣೆ ಮಾಡಿದ ಆಸ್ತಿ ಎಷ್ಟು ಗೊತ್ತಾ?]
ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವಾಗ ಜಯಲಲಿತಾ ಅವರ ಆಸ್ತಿಯ ಲೆಕ್ಕಾಚಾರದಲ್ಲಿ ತಪ್ಪು ಮಾಡಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ಸರ್ಕಾರ ಪ್ರಸ್ತಾಪಿಸಿದೆ. ಪ್ರಕರಣದಲ್ಲಿ ಕರ್ನಾಟಕವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ ಎಂದು ಅರ್ಜಿಯಲ್ಲಿ ಕರ್ನಾಟಕ ತಿಳಿಸಿದೆ.
ಸುಪ್ರೀಂಕೋರ್ಟ್ಗೆ ಈಗ ರಜೆ ಇದ್ದು ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಜುಲೈ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಮೂವರು ನ್ಯಾಯಮೂರ್ತಿಗಳ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ 2015ರ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.