ಮೇ 12 ಮಧ್ಯಾಹ್ನ 1ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ
ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 12ರಂದು ಪ್ರಕಟಗೊಳ್ಳಲಿದೆ ಎಂಬುದು ಖಚಿತವಾಗಿದೆ. ಈ ಬಗ್ಗೆ ಪರೀಕ್ಷಾ ಮಂಡಳಿ ಅಧಿಕಾರಿ ಒನ್ ಇಂಡಿಯಾ ಕನ್ನಡದ ಜತೆ ಮಾತನಾಡಿ, ಫಲಿತಾಂಶದ ದಿನದ ಬಗ್ಗೆ ಖಾತ್ರಿ ಪಡಿಸಿದ್ದಾರೆ
ಬೆಂಗಳೂರು, ಮೇ 10: ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಇದ್ದ ಗೊಂದಲ ಪರಿಹಾರವಾಗಿದ್ದು, ಮೇ 12ರಂದು ಮಧ್ಯಾಹ್ನ 1ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಯಂತಹ ಯಾವುದೇ ಅಹಿತಕರ ಘಟನೆಗಳು ಎಲ್ಲೂ ನಡೆದಿಲ್ಲ.
kseeb.kar.nic.in, results.nic.in, examresults.net ಈ ವೆಬ್ ಸೈಟ್ ಗಳಲ್ಲಿ ಫಲಿತಾಂಶವನ್ನು ನೋಡಬಹುದು.
ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆದ ಎಲ್ಲಾ ವಿಷಯಗಳ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ. ಏಪ್ರಿಲ್ 20ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿತ್ತು. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಅಧಿಕಾರಿ ಈಶ್ವರಯ್ಯ ಅವರನ್ನು ಈ ಬಗ್ಗೆ ವಿಚಾರಿಸಲು ಒನ್ ಇಂಡಿಯಾ ಕನ್ನಡದಿಂದ ಕರೆ ಮಾಡಲಾಗಿತ್ತು.[ಮೇ 11ರಂದು ಕರ್ನಾಟಕ ಪಿಯುಸಿ 2017 ಪರೀಕ್ಷೆ ಫಲಿತಾಂಶ]

ಫಲಿತಾಂಶ ಪ್ರಕಟಣೆಯ ಮುಂಚೆ ಕೈಗೊಳ್ಳಬೇಕಾದ ಕೆಲಸಗಳು ಅಂತಿಮ ಹಂತದಲ್ಲಿವೆ. ಮೇ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ಘೋಷಣೆ ಮಾಡಿಯಾಗಿದೆ. ಹಗಲು-ರಾತ್ರಿ ಅದಕ್ಕಾಗಿಯೇ ಶ್ರಮಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಅಲ್ಲಿಗೆ ಮೇ 12ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಖಚಿತ ಎಂಬಂತಾಗಿದೆ.[ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಕನ್ನಡ ಹಾಡು, ಕಚಡಾ ಇಂಗ್ಲಿಷು, ದೈನೇಸಿ ಮನವಿ]
ಮೇ 11ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಎಂಬುದು ಖಚಿತವಾಗಿದೆ. ಅಂದು ಮಧ್ಯಾಹ್ನ 3 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮರುದಿನ ಆಯಾ ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ. ಈ ಬಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಮಾಹಿತಿ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳಿಗೆ ಒನ್ ಇಂಡಿಯಾ ಕನ್ನಡದ ಕಡೆಯಿಂದ ಬೆಸ್ಟ್ ಆಫ್ ಲಕ್. ಮಂಡಳಿಯ ಅಧಿಕಾರಿಗಳಿಗೆ ವಿದ್ಯಾರ್ಥಿಗಳ ಪರವಾಗಿ ಒಂದು ಥ್ಯಾಂಕ್ಸ್
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications