ಕ್ಷೀರಭಾಗ್ಯ ಯೋಜನೆ ಐದು ದಿನಗಳಿಗೆ ವಿಸ್ತರಣೆ
ಬೆಂಗಳೂರು, ಆಗಸ್ಟ್ 4 : ಕ್ಷೀರಭಾಗ್ಯ ಯೋಜನೆಯನ್ನು ವಾರದ ಮೂರು ದಿನದ ಬದಲು 5 ದಿನಗಳಿಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಯೋಜನೆಯಡಿ ಅಂಗನವಾಡಿಯಿಂದ ಹತ್ತನೇ ತರಗತಿ ವರೆಗಿನ ಸುಮಾರು 1 ಕೋಟಿಗೂ ಹೆಚ್ಚು ಮಕ್ಕಳಿಗೆ ಹಾಲು ನೀಡಲಾಗುತ್ತಿದೆ.
ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರ
ಗೃಹ
ಕಚೇರಿ
ಕೃಷ್ಣಾದಲ್ಲಿ
ಸೋಮವಾರ
ನಡೆದ
ಸಭೆಯಲ್ಲಿ
ಈ
ತೀರ್ಮಾನ
ಕೈಗೊಳ್ಳಲಾಗಿದೆ.
ಸಹಕಾರ
ಸಚಿವ
ಎಚ್.ಎಸ್.ಮಹದೇವ
ಪ್ರಸಾದ್,
ಪಶು
ಸಂಗೋಪನಾ
ಸಚಿವ
ಟಿ.ಬಿ.
ಜಯಚಂದ್ರ,
ಕೆಎಂಎಫ್
ಅಧ್ಯಕ್ಷ
ಪಿ.
ನಾಗರಾಜು
ಮುಂತಾದವರು
ಸಭೆಯಲ್ಲಿ
ಪಾಲ್ಗೊಂಡಿದ್ದರು.
[ಕ್ಷೀರಭಾಗ್ಯ
ಯೋಜನೆ
ವಿಸ್ತರಣೆ?]
ಪ್ರಸ್ತುತ ವಾರದಲ್ಲಿ ಮೂರು ದಿನ ಶಾಲಾ ಮಕ್ಕಳಿಗೆ ಹಾಲನ್ನು ನೀಡಲಾಗುತ್ತಿದೆ. ಸೋಮವಾರ, ಮಂಗಳವಾರ ಮತ್ತು ಶುಕ್ರವಾರ ಹಾಲನ್ನು ನೀಡಲಾಗುತ್ತಿದ್ದು, ಈ ಯೋಜನೆಯನ್ನು ಐದು ದಿನಗಳಿಗೆ ವಿಸ್ತರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. [ಮೊಸರಿನ ದರ 2 ರೂ. ಏರಿಕೆ ಮಾಡಿದ ಕೆಎಂಎಫ್]
7 ಲಕ್ಷ ಲೀಟರ್ ಹಾಲು : ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿಯಿಂದ 10ನೇ ತರಗತಿ ವರೆಗಿನ 1 ಕೋಟಿಗೂ ಹೆಚ್ಚು ಮಕ್ಕಳಿಗೆ ಹಾಲು ನೀಡಲಾಗುತ್ತಿದೆ. ಸದ್ಯ, ಪ್ರತಿದಿನ 7 ಲಕ್ಷ ಲೀಟರ್ ಹಾಲನ್ನು ಈ ಯೋಜನೆಗಾಗಿ ಬಳಸಲಾಗುತ್ತಿದೆ. ಯೋಜನೆ 5 ದಿನಗಳಿಗೆ ವಿಸ್ತರಣೆಯಾದರೆ. 10 ಲಕ್ಷ ಲೀಟರ್ ಹಾಲು ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ.
ಹಾಲಿನ ಪುಡಿಗೆ ಬೇಡಿಕೆ : ಪ್ರಸ್ತುತ 20 ಸಾವಿರ ಮೆಟ್ರಿಕ್ ಟನ್ ಹಾಲಿನ ಪುಡಿ ದಾಸ್ತಾನಾಗಿದೆ. ತೆಲಂಗಾಣದಿಂದ ಒಂದು ಲಕ್ಷ ಲೀಟರ್ ಹಾಲಿಗೆ ಬೇಡಿಕೆ ಬಂದಿದೆ ಹಾಲಿನ ಪುಡಿ ತಯಾರಿಕೆ ಘಟಕಗಳ ಸ್ಥಾಪನೆಗೆ ಅನುಮತಿ ನೀಡುವಂತೆಯೂ ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.