ಜೈಪುರ, ಸೂರತ್ಗೆ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ ಸೇವೆ
ಬೆಂಗಳೂರು, ಆ.09 : ಜೈಪುರ ಮತ್ತು ಸೂರತ್ಗೆ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಲು ಉದ್ದೇಶಿಸಿದೆ. ರಾಜಸ್ಥಾನ ಮತ್ತು ಗುಜರಾತ್ ಸರ್ಕಾರಗಳ ಜೊತೆ ಈ ಕುರಿತು ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ.
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಲವು ದಿನಗಳ ಹಿಂದೆ ಪತ್ರ ಬರೆದಿದ್ದರು. ಜೈಪುರಕ್ಕೆ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ ಸೇವೆ ಆರಂಭಿಸಿದರೆ ಸಹಾಯಕವಾಗಲಿದೆ ಎಂದು ಮನವಿ ಮಾಡಿದ್ದರು.

'ಬೆಂಗಳೂರಿನಲ್ಲಿ ರಾಜಸ್ಥಾನಿಯರು ಇದ್ದಾರೆ. ರಾಜಸ್ಥಾನಿ ಕರ್ನಾಟಕ ಸಂಘದ ಪದಾಧಿಕಾರಿಗಳು ಬಸ್ ಸೇವೆ ಆರಂಭಿಸಿದರೆ ಅನುಕೂಲವಾಗಲಿದೆ' ಎಂದು ಹೇಳಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದರು. ಈ ಪತ್ರಕ್ಕೆ ಉತ್ತರ ಬರೆದಿರುವ ಸಿದ್ದರಾಮಯ್ಯ ಬಸ್ ಸೇವೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಜೈಪುರ ಮತ್ತು ಗುಜರಾತ್ ರಾಜ್ಯದ ಸೂರತ್ ಗೆ ಬಸ್ಸುಗಳು ಮಹಾರಾಷ್ಟ್ರ ಮೂಲಕ ಸಾಗಬೇಕಿದೆ. 2008ರಲ್ಲಿ ನಡೆದಿರುವ ಒಪ್ಪಂದದಂತೆ ಮಹಾರಾಷ್ಟ್ರ 59 ಬಸ್ಸುಗಳ ಸಂಚಾರಕ್ಕೆ ಅನುಮತಿ ಕೊಟ್ಟಿತ್ತು. ಸದ್ಯ, ಅಲ್ಲಿನ ಸಾರಿಗೆ ಇಲಾಖೆ ಜೊತೆ ಸತತ ಸಭೆ ನಡೆಸಿ ಹೊಸ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.
ಈ ಒಪ್ಪಂದದ ಪ್ರಕಾರ ಹೆಚ್ಚಿನ ಬಸ್ಸುಗಳ ಸಂಚಾರಕ್ಕೆ ಅವಕಾಶ ಸಿಗಲಿದೆ. ಇದರಿಂದ, ಕೆಎಸ್ಆರ್ಟಿಸಿ ಜೈಪುರ ಮತ್ತು ಸೂರತ್ಗೆ ಸ್ಲೀಪರ್ ಬಸ್ ಸೇವೆ ಆರಂಭಿಸಲು ಹಾದಿ ಸುಗಮವಾಗಿದೆ. ಕೆಲವೇ ದಿನಗಳಲ್ಲಿ ಬಸ್ ಸೇವೆ ಆರಂಭವಾಗುವ ನಿರೀಕ್ಷೆ ಇದೆ.
ಸದ್ಯ ಕೆಎಸ್ಆರ್ಟಿಸಿಯ 437 ಬಸ್ಸುಗಳು ತಮಿಳುನಾಡಿಗೆ, 337 ಬಸ್ಸುಗಳು ಆಂಧ್ರಪ್ರದೇಶಕ್ಕೆ, 173 ಬಸ್ಸುಗಳು ಕೇರಳಕ್ಕೆ, 29 ಬಸ್ಸುಗಳು ಗೋವಾಕ್ಕೆ ಸೇರಿದಂತೆ ವಿವಿಧ ರಾಜ್ಯಗಳಿಗೆ ಸಂಚಾರ ನಡೆಸುತ್ತಿವೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications