ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಇಲ್ಲ
ಬೆಂಗಳೂರು, ಜುಲೈ 13 : ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಎರಡು ದಿನಗಳ ಕಾಲ ಚರ್ಚೆ ನಡೆದಿದೆ. ಇಂದಿನ ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಉತ್ತರ ನೀಡಲಿದ್ದಾರೆ. [ಎಂ.ಕೆ.ಗಣಪತಿ ಆತ್ಮಹತ್ಯೆ, ಸದನದಲ್ಲಿ ಸಿದ್ದರಾಮಯ್ಯ ಕೊಟ್ಟ ಉತ್ತರ]
ಬುಧವಾರದ
ಕಲಾಪ
ಆರಂಭವಾಗುವುದಕ್ಕೂ
ಮುನ್ನ
ಶಾಸಕಾಂಗ
ಪಕ್ಷದ
ಸಭೆ
ನಡೆಯುತ್ತಿದೆ.
ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರ
ಅಧ್ಯಕ್ಷತೆಯಲ್ಲಿ
ಈ
ಸಭೆ
ನಡೆಯುತ್ತಿದ್ದು,
ಸಚಿವ
ಕೆ.ಜೆ.ಜಾರ್ಜ್
ಅವರ
ವಿರುದ್ಧ
ಪ್ರತಿಪಕ್ಷಗಳು
ಮಾಡುತ್ತಿರುವ
ಆರೋಪಗಳಿಗೆ
ತಿರುಗೇಟು
ನೀಡುವ
ಬಗ್ಗೆ
ಚರ್ಚೆ
ನಡೆಸಿದೆ.
[ಗಣಪತಿ
ಆತ್ಮಹತ್ಯೆ,
ಮೌನ
ಮುರಿದ
ಸಚಿವ
ಕೆಜೆ
ಜಾರ್ಜ್]
'ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುವುದಾದದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ' ಎಂದು ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. [ಎಂಕೆ ಗಣಪತಿ ಆತ್ಮಹತ್ಯೆ : ಸದನದಲ್ಲಿ ಯಾರು, ಏನು ಹೇಳಿದರು?]
ಆದರೆ, ಜಾರ್ಜ್ ರಾಜೀನಾಮೆ ಪಡೆಯದಿರಲು ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ಜಾರ್ಜ್ ಅವರ ಪರ ನಿಲ್ಲುವಂತೆ ಸಿದ್ದರಾಮಯ್ಯ ಅವರು ಎಲ್ಲಾ ಶಾಸಕರಿಗೆ ಸೂಚನೆ ಕೊಟ್ಟಿದ್ದಾರೆ. ['ಗಣಪತಿ ಅವರ ಜೊತೆ ಡೈಯಿಂಗ್ ಡಿಕ್ಲೆರೇಷನ್ ಸಮಾಧಿಯಾಗಿದೆ']
ಮತ್ತೊಂದು ಕಡೆ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಇಂದಿನ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ.