ಕೇಂದ್ರದಲ್ಲಿ ಅಧಿಕಾರಕ್ಕೆ ಯಾರು: ಕೋಡಿಮಠ ಭವಿಷ್ಯ
ಭಾರತೀಯ ಜನತಾ ಪಕ್ಷವು ತನ್ನದೇ ಸಾಮರ್ಥದಿಂದ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದಿಲ್ಲವಾದರೂ ಇತರೆ ಪಕ್ಷಗಳ ನೆರವಿನೊಂದಿಗೆ ಕೇಂದ್ರದಲ್ಲಿ ನೂತನ ಸರಕಾರ ಸ್ಥಾಪಿಸಲಿದೆ ಎಂದು ಕೋಡಿಮಠ ಶ್ರೀ ಭವಿಷ್ಯ ಹೇಳಿದ್ದಾರೆ. ( ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಆಗೋ ಯೋಗ ಇದೆ )
ರಾಯಚೂರು ಜಿಲ್ಲೆಯ ಗೊರೇಬಾಳದ ವಳಬಳ್ಳಾರಿ ಗ್ರಾಮದ ಚನ್ನಬಸವ ಶಿವಯೋಗಿಗಳ 31ನೇ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಕೋಡಿಮಠ ಸ್ವಾಮಿಗಳು ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದರು.
ಮುದ್ದಿನ ಗಿಳಿ ಮುದ್ದಾಗಿ ಮುದುಕಾಗಿದೆ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಹಿನ್ನಡೆ ಸಾಧಿಸಲಿದೆ ಎಂದು ಸೂಚ್ಯವಾಗಿ ಹೇಳಿದರು. ( ಭವಿಷ್ಯದ ವ್ಯಾಖ್ಯಾನ ಬದಲಿಸಿದ ಕೋಡಿಮಠಶ್ರೀ )
ಮುಂದಿನ ಲೀಕಸಭಾ ಚುನಾವಣೆಯಲ್ಲಿ ಯಾವುದೇ ರಾಷ್ಟ್ರೀಯ ಪಕ್ಷಗಳಿಗೆ ಸ್ಪಷ್ಟ ಬಹುಮತ ಸಿಗುವುದಿಲ್ಲ. ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಬೇಕಾದ ಅನಿವಾರ್ಯತೆ ಎದುರಾಗಲಿದೆ. ಬಿಜೆಪಿ, ಇತರೆ ಪಕ್ಷಗಳೊಂದಿಗೆ ಕೈಜೋಡಿಸಿ ಅಧಿಖಾರದ ಗದ್ದುಗೆ ಏರಲಿದೆ ಎಂದು ಕೋಡಿಮಠ ಸ್ವಾಮಿಗಳು ಹೇಳಿದರು.