ಮಾಸ್ತಿ ಗುಡಿ ದುರಂತ: ಚಿತ್ರ ತಂಡದ ವಿರುದ್ಧ ಚಾರ್ಜ್ ಶೀಟ್
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರ ದುರಂತ ಸಾವಿಗೀಡಾಗಿದ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ.
ಮಾಗಡಿ, ಏಪ್ರಿಲ್ 27: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರ ದುರಂತ ಸಾವಿಗೀಡಾಗಿದ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿಯ ಜೆ ಎಂ ಎಫ್ ಸಿ ಕೋರ್ಟಿನಲ್ಲಿ ಆರು ಮಂದಿ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ತಾವರೆಕೆರೆ
ಪೊಲೀಸರು
ಈಗಾಗಲೇ
ಚಿತ್ರತಂಡದ
ವಿರುದ್ಧ
ಪ್ರಕರಣ
ದಾಖಲಿಸಿಕೊಂಡು
ಎಫ್
ಐಆರ್
ಹಾಕಿರುವುದನ್ನು
ಇಲ್ಲಿ
ಸ್ಮರಿಸಬಹುದು.
[ಮಾಸ್ತಿಗುಡಿ
ದುರಂತ:
ಅನಿಲ್,
ಉದಯ್
ದುರಂತ
ಸಾವಿನ
ವಿಡಿಯೋ]
ಅನಿಲ್ ಮತ್ತು ರಾಘವ್ ಉದಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 304(A) ಹಾಗೂ 308 ಅನ್ವಯ ಕೇಸು ದಾಖಲಾಗಿದೆ.
ಮಾಗಡಿಯ ಜೆಎಂಎಫ್ಸಿ ಕೋರ್ಟ್, ಐ.ಪಿ.ಸಿ 304 (ಅಜಾಕರೂಕತೆಯಿಂದ ಉಂಟಾದ ಸಾವು ) ರಲ್ಲಿ ನಿರ್ಮಾಪಕ ನಾಗಶೇಖರ್, ಸುಂದರಗೌಡ, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಸುಮಾರು 450 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಆದರೆ, ಚಿತ್ರದ ನಿರ್ಮಾಪಕ ಸುಂದರ್ ಗೌಡ ಹಾಗೂ ನಿರ್ದೇಶಕ ನಾಗಶೇಖರ್ ಅವರು ಜಾಮೀನಿನ ಮೇಲೆ ಹೊರ ಬಂದಿರುವುದರಿಂದ ಚಿತ್ರ ಬಿಡುಗಡೆಗೆ ಯಾವುದೇ ಅಡ್ಡಿ ಕಂಡು ಬಂದಿಲ್ಲ.
ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಎ-1 ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಅವರು ಎ-2 ಆರೋಪಿ, ಸಹ ನಿರ್ದೇಶಕ ಎ-3 ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ಎ-4 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ. ಸಾಹಸ ಸಹ ನಿರ್ದೇಶಕ ಎ-5 ಆರೋಪಿಯಾಗಿದ್ದು, ಚಿತ್ರದ ನಾಯಕ ನಟ ದುನಿಯಾ ವಿಜಯ್ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಸಾಧ್ಯತೆಯಿಂದ ಬಚಾವಾದರು.