ಮುಂಗಾರು ಪ್ರವೇಶ ವಿಳಂಬ, ಬೆಂಗಳೂರಲ್ಲಿ ಜೋರು ಮಳೆ ಸದ್ಯಕ್ಕಿಲ್ಲ!
ನಿರೀಕ್ಷೆಗಿಂತ ಹೆಚ್ಚು ವಿಳಂಬವಾಗಿರುವ ಮುಂಗಾರು, ನಿತ್ಯ ಮಳೆ ಅನುಭವಿಸಿರುವ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಮಳೆ ಜೋರು, ಕೃಷಿ ಚಟುವಟಿಕೆ ವೇಳಾಪಟ್ಟಿ ಏರು ಪೇರು.
ಬೆಂಗಳೂರು, ಜೂನ್ 11: ಈ ಬಾರಿ ನಿರೀಕ್ಷೆಗಿಂತ ಹೆಚ್ಚು ವಿಳಂಬವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಭಾಗಗಗಳಲ್ಲಿ ಮಳೆ ಕಾಣಿಸಿಕೊಂಡಿದ್ದರೂ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ ಎಂಬ ಅಧಿಕೃತ ಹೇಳಿಕೆ ನೀಡಲು ಹಿಂದು ಮುಂದು ನೋಡುವಂತಾಗಿದೆ.
ಜೂನ್ 15ರ ತನಕ ರಾಜ್ಯದ ವಿವಿಧೆಡೆ ಜೋರು ಮಳೆ ನಿರೀಕ್ಷಿತವಾಗಿದೆ. ಬೆಂಗಳೂರಿನಲ್ಲಿ ಎಂದಿನಂತೆ ಸಂಜೆ ವೇಳೆ ಸಾಧಾರಾಣ ಮಳೆ ಬೀಳಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ, ಕಲಬುರಗಿ, ಬೀದರ್, ಹೈದರಾಬಾದ್ -ಕರ್ನಾಟಕದಲ್ಲಿ ಮಳೆ ಚುರುಕಾಗಲಿದೆ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ವಾರ ಜೋರು ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
24Hrs ☔ Forecast for #BBMP. 8.30AM of 10 June 17 to 8.30AM of 11 June 17. V.Light to Moderate☔ expected across #BBMP. pic.twitter.com/ITTZOHePF8
— KSNDMC (@KarnatakaSNDMC) June 10, 2017
ಬೆಂಗಳೂರಿಗೆ ಮುನ್ಸೂಚನೆ : ಸಾಧಾರಾಣ ಮಳೆ ಜೂನ್ 14ರ ತನಕ ನಿರೀಕ್ಷಿಸಬಹುದು. ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಜೂನ್ 12ರಿಂದ ಎರಡು ದಿನ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯೂ ಇದೆ.
Weather Forecast for Jun 11: Monsoon in Mumbai soon, Rain in Goa, Odisha, Karnataka, Gujarat: https://t.co/osSr6eo7Yq @mataonline @TOIMumbai
— SkymetWeather (@SkymetWeather) June 11, 2017
ಕರ್ನಾಟಕದ ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ, ಉತ್ತರ ಹಾಗೂ ಕೇಂದ್ರ ಭಾಗಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಯಂತ್ರಣ ಕೇಂದ್ರದ ನಿರ್ದೇಶಕ ಜಿಎಸ್ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.(ಐಎಎನ್ಎಸ್)