ಬೆಳಗಾವಿ ಜಾನುವಾರು ಆಸ್ಪತ್ರೆ ನಿರ್ಮಾಣ ಯಾವಾಗ?
ಮೂರು ವರ್ಷಗಳ ಹಿಂದೆ ನೀಡಲಾಗಿದ್ದ ಅನುದಾನ; ಈವರೆಗೆ ನಯಾಪೈಸೆಯೂ ಹರಿದುಬಂದಿಲ್ಲದ ಹಿನ್ನೆಲೆಯಲ್ಲಿ ಕಾಮಗಾರಿ ನೆನೆಗುದಿಗೆ.
ಬೆಳಗಾವಿ, ಫೆಬ್ರವರಿ 7: ಹೈನುಗಾರರಿಗೆ ಹಾಗೂ ಸಾಕಪ್ರಾಣಿಗಳಿಗೆ ನೆರವಾಗುವ ಮಹದೋದ್ದೇಶದೊಂದಿಗೆ ನಿರ್ಮಿಸಲುದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಅನುದಾನ ಸರಿಯಾಗಿ ದೊರಯದಿದ್ದ ಹಿನ್ನೆಲೆಯಲ್ಲಿ ಇಡೀ ಯೋಜನೆ ನೆನೆಗುದಿಗೆ ಬಿದ್ದಿರುವುದು ಇಲ್ಲಿನ ಜನತೆಗೆ ಬೇಸರ ತರಿಸಿದೆ.
ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಮಹತ್ವದ ಯೋಜನೆ ಇದಾಗಿದ್ದು, ವಿವಿಧ ರೋಗ ರುಜಿನೆಗಳಿಂದ ನರಳುತ್ತಿರುವ ಹಾಗೂ ಅಪಘಾತಕ್ಕೀಡಾದ ಪ್ರಾಣಿಗಳಿಗೆ ಉತ್ತಮ ದರ್ಜೆಯ ಚಿಕಿತ್ಸೆ ನೀಡುವ ಸಲುವಾಗಿಯೇ ಬೆಳಗಾವಿಯಲ್ಲೊಂದು ಸುಸಜ್ಜಿತ ಆಸ್ಪತ್ರೆಯೊಂದನ್ನು ಕಟ್ಟುವ ಯೋಜನೆ ಹಮ್ಮಿಕೊಳ್ಳಲಾಗಿತ್ತು.

ಕೇವಲ ಬೆಳಗಾವಿ ಜಿಲ್ಲೆಗೆ ಮಾತ್ರವಲ್ಲದೆ ಈ ಪ್ರಾಂತ್ಯದ ಸುಮಾರು ಏಳು ಜಿಲ್ಲೆಗಳಿಗೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಕೆಲವು ವಿಶೇಷ ಪ್ರಕರಣಗಳಿಗೂ ಇಲ್ಲಿ ಚಿಕಿತ್ಸೆ ನೀಡುವ ಮಹದೋದ್ದೇಶದೊಂದಿಗೆ ಮೂರು ವರ್ಷಗಳ ಹಿಂದೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅಸ್ತು ಎಂದಾಗಿತ್ತು.
ಆಸ್ಪತ್ರೆ ನಿರ್ಮಾಣಕ್ಕಾಗಿ ಪಶು ಸಂಗೋಪನಾ ಇಲಾಖೆಗೆ ಸೇರಿದ ಒಂದು ಎಕರೆ ಜಾಗ ಗುರುತಿಸಿ, 2015-16ರಲ್ಲೇ ಈ ಆತ್ಪತ್ರೆಗೆ ₹ 3.60 ಕೋಟಿ ಅನುದಾನ ನೀಡಲಾಗಿತ್ತು.
ಇಷ್ಟೆಲ್ಲಾ ಆದರೂ, ಅನುದಾನ ಮಂಜೂರಾಗಿದ್ದರೂ ಕಾಮಗಾರಿಗೆ ಹಣ ಹರಿದುಬರದೇ ಇಡೀ ಯೋಜನೆ ನೆನೆಗುದಿಗೆ ಬಿದ್ದಿದೆ. ಹಾಗಾಗಿ, ಈ ಯೋಜನೆ ಕೇವಲ ಕಾಗದದಲ್ಲೇ ಉಳಿದಿದೆ. ಇದು ಇಲ್ಲಿನ ಜನತೆಗೆ ಬೇಸರ ತರಿಸಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications