ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶನಿವಾರ ರಾಯಚೂರಿಗೆ ರಾಹುಲ್ ಗಾಂಧಿ ಭೇಟಿ

|
Google Oneindia Kannada News

ರಾಯಚೂರು, ಅ.11 : ಕರ್ನಾಟಕ ಕಾಂಗ್ರೆಸ್ ರಾಯಚೂರಿನಲ್ಲಿ ಶನಿವಾರ ಬೃಹತ್ ಸಮಾವೇಶ ಆಯೋಜಿಸಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಡಿಕೆಶಿ ಐಟಿ ದಾಳಿ ಪ್ರಭಾವ, ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಿಲ್ಲǃಡಿಕೆಶಿ ಐಟಿ ದಾಳಿ ಪ್ರಭಾವ, ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಿಲ್ಲǃ

ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಈ ಕುರಿತು ಮಾಹಿತಿ ನೀಡಿದ್ದಾರೆ. 'ಹೈದರಾಬಾದ್ ಕರ್ನಾಟಕ ಕಾರ್ಯಕರ್ತರ ಸಮಾವೇಶವನ್ನು ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣದ ಆವರಣದಲ್ಲಿ ಆಯೋಜಿಸಲಾಗಿದೆ' ಎಂದು ಹೇಳಿದರು.

Rahul Gandhi to address rally at Raichur on August 12, 2017

'ಹೈದರಾಬಾದ್ ಕರ್ನಾಟಕದ ಅಭಿವೃದ್ಧಿ ಬಗ್ಗೆ ರಾಹುಲ್ ಗಾಂಧಿ ಅವರು ವಿಶೇಷ ಕಾಳಜಿ ಇಟ್ಟುಕೊಂಡಿದ್ದಾರೆ. 371-ಜೆ ಜಾರಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಅವರಿಗೆ ಈ ಭಾಗದ ಜನರು ಅಭಿನಂದನೆ ಸಲ್ಲಿಸುವರು. ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ' ಎಂದು ಸಚಿವರು ವಿವರಣೆ ನೀಡಿದರು.

ಶಿವಕುಮಾರ್ ಜತೆ ಅಂತರ ಕಾಯ್ದುಕೊಂಡಿಲ್ಲ, ಇದು ಮಾಧ್ಯಮ ಸೃಷ್ಟಿ: ಸಿಎಂಶಿವಕುಮಾರ್ ಜತೆ ಅಂತರ ಕಾಯ್ದುಕೊಂಡಿಲ್ಲ, ಇದು ಮಾಧ್ಯಮ ಸೃಷ್ಟಿ: ಸಿಎಂ

ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಂಸದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

ರಾಯಚೂರು ನಗರದ ತುಂಬಾ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ಫ್ಲೆಕ್ಸ್, ಬ್ಯಾನರ್ ರಾರಾಜಿಸುತ್ತಿವೆ. ಭದ್ರತೆಗಾಗಿ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

English summary
Congress Vice President Rahul Gandhi will be visiting Raichur, Karnataka on August 12, 2017 to meet party leaders and address a Hyderabad Karnataka workers rally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X