ಶನಿವಾರ ರಾಯಚೂರಿಗೆ ರಾಹುಲ್ ಗಾಂಧಿ ಭೇಟಿ
ರಾಯಚೂರು, ಅ.11 : ಕರ್ನಾಟಕ ಕಾಂಗ್ರೆಸ್ ರಾಯಚೂರಿನಲ್ಲಿ ಶನಿವಾರ ಬೃಹತ್ ಸಮಾವೇಶ ಆಯೋಜಿಸಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಡಿಕೆಶಿ ಐಟಿ ದಾಳಿ ಪ್ರಭಾವ, ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಿಲ್ಲǃ
ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಈ ಕುರಿತು ಮಾಹಿತಿ ನೀಡಿದ್ದಾರೆ. 'ಹೈದರಾಬಾದ್ ಕರ್ನಾಟಕ ಕಾರ್ಯಕರ್ತರ ಸಮಾವೇಶವನ್ನು ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣದ ಆವರಣದಲ್ಲಿ ಆಯೋಜಿಸಲಾಗಿದೆ' ಎಂದು ಹೇಳಿದರು.
'ಹೈದರಾಬಾದ್ ಕರ್ನಾಟಕದ ಅಭಿವೃದ್ಧಿ ಬಗ್ಗೆ ರಾಹುಲ್ ಗಾಂಧಿ ಅವರು ವಿಶೇಷ ಕಾಳಜಿ ಇಟ್ಟುಕೊಂಡಿದ್ದಾರೆ. 371-ಜೆ ಜಾರಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಅವರಿಗೆ ಈ ಭಾಗದ ಜನರು ಅಭಿನಂದನೆ ಸಲ್ಲಿಸುವರು. ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ' ಎಂದು ಸಚಿವರು ವಿವರಣೆ ನೀಡಿದರು.
ಶಿವಕುಮಾರ್ ಜತೆ ಅಂತರ ಕಾಯ್ದುಕೊಂಡಿಲ್ಲ, ಇದು ಮಾಧ್ಯಮ ಸೃಷ್ಟಿ: ಸಿಎಂ
ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಂಸದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.
ರಾಯಚೂರು ನಗರದ ತುಂಬಾ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ಫ್ಲೆಕ್ಸ್, ಬ್ಯಾನರ್ ರಾರಾಜಿಸುತ್ತಿವೆ. ಭದ್ರತೆಗಾಗಿ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.