ರಾಯಚೂರು ಜಿಲ್ಲಾ ಸರ್ಕಾರಿ ನೌಕರರ 1 ದಿನದ ವೇತನಕ್ಕೆ ಕತ್ತರಿ
ರಾಯಚೂರಿನಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ 1ದಿನದ ವೇತನವನ್ನು ಕಡಿತಗೊಳಿಸಲಾಗಿದೆ. ಇದರಿಂದ ಕೆಲ ಸರ್ಕಾರಿ ನೌಕರರಲ್ಲಿಯೇ ವಿರೋಧಗಳು ಕೇಳಿಬರುತ್ತಿವೆ.
ರಾಯಚೂರು, ನವೆಂಬರ್. 30 : ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ನೌಕರರ ತಿಂಗಳ ವೇತನದಲ್ಲಿ ಒಂದು ದಿನದ ವೇತನಕ್ಕೆ ಕತ್ತರಿ ಬೀಳಲಿದೆ. ಡಿಸೆಂಬರ್ 2ರಿಂದ 4 ವರೆಗೆ ಮೂರು ದಿನ ರಾಯಚೂರಿನಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಸರ್ಕಾರಿ ನೌಕರರ ಒಂದು ದಿನದ ವೇತನ ಕಟ್ ಆಗಲಿದೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆಯಾಗಿ ರಾಯಚೂರು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರ ಒಂದು ದಿನದ ವೇತನವನ್ನ ಪಡೆಯಲಾಗಿದೆ. ಒಂದು ದಿನದ ವೇತನದ ಅಂದಾಜು 1 ಕೋಟಿ 25 ಲಕ್ಷ ರೂ ಆಗಲಿದೆ. ಈ ಹಣದಲ್ಲಿ ಶೇಕಡಾ 70 ರಷ್ಟನ್ನು ಮಾತ್ರ ಸಮ್ಮೇಳನಕ್ಕೆ ಬಳಸಲಾಗುತ್ತಿದೆ.[82ನೇ 'ರಾಯಚೂರು' ಕನ್ನಡ ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ]
ಉಳಿದ 30ರಷ್ಟು ಹಣ ಸರ್ಕಾರೇತರ ಸಂಸ್ಥೆಗೆ ನೀಡುತ್ತಿದೆ ಎಂದು ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳೇ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ.[ಸಾಹಿತ್ಯ ಸಮ್ಮೇಳನಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ರೊಟ್ಟಿ]

ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಒಟ್ಟು 4 ಕೋಟಿ ರೂ. ಹಣ ನೀಡಿದೆ. ಈಗಾಗಲೇ 2 ಕೋಟಿ ರೂ. ಹಣ ಬಿಡುಗಡೆಯೂ ಆಗಿದೆ. ಇನ್ನು ಸಾರ್ವಜನಿಕರಿಂದ ಸುಮಾರು 80 ಲಕ್ಷ ರೂ. ದೇಣಿಗೆ ಸಂಗ್ರಹವಾಗಿದೆ.
ಜೊತೆಗೆ ಸರ್ಕಾರಿ ನೌಕರರ ದಿನದ ವೇತನ 1.25 ಕೋಟಿ ರೂ. ಒಟ್ಟು 8 ಕೋಟಿ ರೂಪಾಯಿಗೂ ಹೆಚ್ಚು ಹಣ ಜಮೆಯಾಗಲಿದೆ.
ಇಷ್ಟು ಹಣ ಬೇಕಿತ್ತಾ ಅನ್ನೋ ಶಿಕ್ಷಕರು ಸರ್ಕಾರೇತರ ಸಂಸ್ಥೆಗೆ ಶೇಕಡಾ 30 ರಷ್ಟು ಹಣ ನೀಡುತ್ತಿರುವುದನ್ನು ಸರ್ಕಾರಿ ನೌಕರರೇ ವಿರೋಧಿಸುತ್ತಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications