ಸಿನಿಮಾಗಾಗಿ ಬಣ್ಣ ಹಚ್ಚಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂನ್ 22: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿನಿಮಾವೊಂದರಲ್ಲಿ ಮುಖ್ಯಮಂತ್ರಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ನಿರ್ಮಾಣ ಹಂತದಲ್ಲಿರುವ 'ಸಮ್ಮರ್ ಹಾಲಿಡೇಸ್' ಎಂಬ ಕನ್ನಡ -ಇಂಗ್ಲೀಷ್ ಸಿನಿಮಾದಲ್ಲಿ ಅವರು ಬಣ್ಣ ಹಚ್ಚಲಿದ್ದಾರೆ.
ಈ ಮೂಲಕ ಅಧಿಕಾರದಲ್ಲಿರುವಾಗಲೇ ಸಿನಿಮಾದಲ್ಲಿ ನಟಿಸಿದ ಮೊದಲ ಮುಖ್ಯಮಂತ್ರಿ ಎಂಬ ಕೀರ್ತಿಗೂ ಅವರು ಪಾತ್ರರಾಗಲಿದ್ದಾರೆ.

ಈ ಕುರಿತು 'ಸಿಎನ್ಎನ್ ನ್ಯೂಸ್ 18' ಗೆ ಪ್ರತಿಕ್ರಿಯೆ ನೀಡಿರುವ ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್, "ಸಿದ್ದರಾಮಯ್ಯ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಬುಧವಾರ ಈ ಕುರಿತು ನಮಗೆ ಖಚಿತ ಮಾಹಿತಿ ಸಿಕ್ಕಿದೆ. ಚಿತ್ರದಲ್ಲಿ ಯಾವುದೇ ರೀತಿಯಲ್ಲೂ ಅಶ್ಲೀಲ ಹಾಗೂ ಹಿಂಸಾತ್ಮಕ ಸನ್ನಿವೇಶಗಳು ಇರಬಾರದು ಎಂದಿದ್ದಾರೆ. ನಾವು ಅವರಿಗೆ ಸಿನಿಮಾದ ಕಥೆಯನ್ನು ವಿವರಿಸಿದ್ದೇವೆ. ನಂತರ ಅವರು ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಈಗಾಗಲೇ ಶೇಕಡಾ 80 ಚಿತ್ರೀಕರಣ ಮುಗಿದಿದೆ. ಮುಖ್ಯಮಂತ್ರಿಗಳು ಯಾವಾಗ ಸಮಯ ನೀಡುತ್ತಾರೋ ಆಗ ನಾವು ಅವರ ಭಾಗವನ್ನು ಶೂಟ್ ಮಾಡಿ ಸಿನಿಮಾದ ಶೂಟಿಂಗ್ ಮುಗಿಸುತ್ತೇವೆ," ಎಂದು ಹೇಳಿದ್ದಾರೆ.
ಹಾಗಂಥ ಸಿದ್ದರಾಮಯ್ಯನವರಿಗೆ ನಟನೆ ಹೊಸದೇನೂ ಅಲ್ಲ. ಈ ಹಿಂದೆ ತಮ್ಮ ಕಾಲೇಜು ದಿನಗಳಲ್ಲಿ ನಾಟಕಗಳಲ್ಲಿ ಅವರು ಅಭಿನಯಿಸಿದ್ದರು. ಮತ್ತು ತಾವು ನಟನೆಯನ್ನು ಇಷ್ಟಪಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು ತಾವು ನಟನೆ ಮಾಡಲಿರುವ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, "ಕವಿತಾ ತುಂಬಾ ಸಲ ಬಂದು ಕೇಳಿಕೊಂಡರು. ಕೊನೆಗೆ ನಾನು ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ," ಎಂದಿದ್ದಾರೆ.
ಇದೇ ಸಿನಿಮಾದಲ್ಲಿ ಕವಿತಾ ಪುತ್ರಿ ಇಶಾ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಕೂಡಾ ಸಿನಿಮಾದಲ್ಲಿರಲಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications