ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಉತ್ತರಾಧಿಕಾರಿ ಘೋಷಣೆ
ಚಿಕ್ಕಮಗಳೂರು, ಜ.5 : ಕುಪ್ಪೂರು ವೆಂಕಟೇಶ್ವರಪ್ರಸಾದ ಶರ್ಮ ಅವರು ಶೃಂಗೇರಿ ಶ್ರೀ ಶಾರದಾ ಪೀಠದ 37ನೇ ಪೀಠಾಧಿಪತಿಯಾಗಲಿದ್ದಾರೆ. ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರು ಭಾನುವಾರ ಉತ್ತರಾಧಿಕಾರಿ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
ಭಾನುವಾರ ಜಗದ್ಗುರುಗಳ ಪೀಠಾರೋಹಣದ ರಜತ ಮಹೋತ್ಸವ ಆಚರಣೆಯ ಶುಭ ಸನ್ನಿವೇಶಕ್ಕಾಗಿ ಮಠದಲ್ಲಿ ಶಿಷ್ಯರು ಆಯೋಜಿಸಿದ್ದ ಗುರುವಂದನಾ ಸಮಾರಂಭದಲ್ಲಿ ಮಾತನಾಡಿದ ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರು ಕುಪ್ಪೂರು ವೆಂಕಟೇಶ್ವರಪ್ರಸಾದ ಶರ್ಮ ಮುಂದಿನ ಉತ್ತರಾಧಿಕಾರಿ ಎಂದು ಘೋಷಿಸಿದರು. [ಶೃಂಗೇರಿ : ರಾಜಗೋಪುರದ ವಿಶೇಷತೆಗಳು]

ಶಾರದಾ ಪೀಠದ 37ನೇ ಪೀಠಾಧಿಪತಿಯನ್ನಾಗಿ ಕುಪ್ಪೂರು ವೆಂಕಟೇಶ್ವರಪ್ರಸಾದ ಶರ್ಮ (25) ಅವರನ್ನು ಆಯ್ಕೆ ಮಾಡಿದ್ದು ಅವರಿಗೆ ಶಿಷ್ಯ ಸ್ವೀಕರವನ್ನು ಜ.22 ಮತ್ತು 23ರಂದು ನೀಡುವುದಾಗಿ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹೇಳಿದರು.

ರಜತ ಮಹೋತ್ಸವಕ್ಕೆ ಆಗಮಿಸಿದ ಶಿಷ್ಯರೆಲ್ಲರೂ ಪರಿಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಈ ಪ್ರಕಟಣೆಯನ್ನು ಮಾಡುತ್ತಿರುವುದಾಗಿ ತಿಳಿಸಿದ ಶ್ರೀಗಳು, ತಮಗೆ 64 ವರ್ಷ ವಯಸ್ಸಾಗಿದ್ದು ಉತ್ತರಾಧಿಕಾರಿ ನೇಮಕದ ಬಗ್ಗೆ ತಾಯಿ ಶಾರದೆ ನೆನಪಿಸಿದ್ದಾಳೆ ಎಂದರು.

ಶ್ರೀಮಠದಲ್ಲಿ ಗುರು-ಶಿಷ್ಯ ಪರಂಪರೆಗೆ ಅತ್ಯಂತ ಉನ್ನತ ಸ್ಥಾನವಿದ್ದು, 40 ವರ್ಷಗಳ ಹಿಂದೆ ನಾವು ಪಡೆದಿದ್ದ ಶಿಷ್ಯತ್ವ ಸ್ವೀಕಾರದಂತೆ ಇದೀಗ ನಮಗೆ ಶಿಷ್ಯ ಪರಿಗ್ರಹ ನೀಡುವ ಅವಕಾಶ ಒದಗಿ ಬಂದಿದೆ. ಸಕಲ ಸದ್ಗುಣಗಳನ್ನು ಹೊಂದಿರುವ ಶಿಷ್ಯನನ್ನು ನಾವು ಆಯ್ಕೆ ಮಾಡಿದ್ದು, 5-6 ವರ್ಷಗಳಿಂದ ಅವರಿಗೆ ಶಾಸ್ತ್ರಾಭ್ಯಾಸ ಪಾಠ ಕಲಿಸುತ್ತಿದ್ದೇವೆ ಎಂದು ಶ್ರೀಗಳು ಹೇಳಿದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications