ಬಿರು ಬೇಸಿಗೆ : ಸರ್ಕಾರಿ ಕಚೇರಿ ವೇಳಾಪಟ್ಟಿ ಬದಲಾವಣೆ
ಬೆಂಗಳೂರು, ಏಪ್ರಿಲ್ 01 : ಬಿರು ಬೇಸಿಗೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವ ಕಾರಣ ಕಲಬುರಗಿ ವಿಭಾಗದ 6 ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯನ್ನು ಸಮಯವನ್ನು ಬದಲಾವಣೆ ಮಾಡಲಾಗಿದೆ.
ಕರ್ನಾಟಕ
ಸರ್ಕಾರದ
ಸಿಬ್ಬಂದಿ
ಮತ್ತು
ಆಡಳಿತ
ಸುಧಾರಣಾ
ಇಲಾಖೆಯ
ಉಪ
ಕಾರ್ಯದರ್ಶಿ
ಆರ್.ಶಿವಲಿಂಗಯ್ಯ
ಅವರು
ಏ.1ರ
ಶುಕ್ರವಾರ
ಈ
ಕುರಿತು
ಆದೇಶ
ಹೊರಡಿಸಿದ್ದಾರೆ.
ಇಂದಿನಿಂದಲೇ
ಈ
ಆದೇಶ
ಜಾರಿಗೆ
ಬಂದಿದ್ದು,
ಏಪ್ರಿಲ್
ಮತ್ತು
ಮೇ
ತಿಂಗಳಿನಲ್ಲಿ
ಈ
ಆದೇಶ
ಜಾರಿಯಲ್ಲಿರುತ್ತದೆ.
[ಸುಡುತ್ತಿದೆ
ಕರ್ನಾಟಕ,
ಬಾ
ಮಳೆಯೇ
ಬೇಗ
ಬಾ]
ಕಚೇರಿ ವೇಳಾಪಟ್ಟಿ : ಶುಕ್ರವಾರ ಹೊರಡಿಸಿರುವ ಆದೇಶದಂತೆ ರಾಜ್ಯ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ತನಕ ಕಾರ್ಯನಿರ್ವಹಿಸಲಿವೆ. ಸಮಯ ಬದಲಾವಣೆಯಾದ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಎಂದಿನಂತೆ ಲೋಪ/ಅಡೆ-ತಡೆಗಳಿಲ್ಲದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕಾಗಿದೆ. [ಎರಡೇ ಎರಡು ಬಕೆಟ್ ನೀರುಳಿಸಲು ಸಾಧ್ಯವೆ? ಪ್ರಯತ್ನಿಸಿ]
ಸರ್ಕಾರದ ತುರ್ತು ಕೆಲಸವಿದ್ದಾಗ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರಿ ಕೆಲಸ ನಿರ್ವಹಿಸಲು ಆದೇಶ ಮಾಡಿದಲ್ಲಿ ಅಂತಹ ಆದೇಶಗಳನ್ನು ತಪ್ಪದೇ ಪಾಲಿಸಿ, ಸರ್ಕಾರಿ ಕೆಲಸದ ಸಮಯ ಮೀರಿದ್ದರೂ ಕೆಲಸಕ್ಕೆ ಹಾಜರಾಗತಕ್ಕದ್ದು ಎಂಬ ಷರತ್ತಿಗೊಳಪಟ್ಟು ಈ ಆದೇಶ ಹೊರಡಿಸಲಾಗಿದೆ.[ಜಲಾಶಯಗಳ ನೀರು ಕುಡಿಯುವ ನೀರಿಗಾಗಿ ಮಾತ್ರ]