ಗಿರೀಶ್ ಕಾರ್ನಾಡ್ ವಿರುದ್ಧ ಬೆಂಗಳೂರು, ಮಂಡ್ಯದಲ್ಲಿ ದೂರು
ಬೆಂಗಳೂರು, ನವೆಂಬರ್ 12 : 'ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು' ಎಂದು ಹೇಳಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಮಂಡ್ಯ ಮತ್ತು ಬೆಂಗಳೂರಿನಲ್ಲಿ ದೂರು ದಾಖಲಾಗಿವೆ.
ಈ
ದೂರುಗಳನ್ನು
ಪೊಲೀಸರು
ಸ್ವೀಕರಿಸಿದ್ದು
ಅಧಿಕೃತವಾಗಿ
ದಾಖಲಿಸಿಕೊಂಡಿಲ್ಲ.
ಇಂತಹ
ದೂರುಗಳನ್ನು
ಹೇಗೆ
ದಾಖಲಿಸಿಕೊಳ್ಳಬೇಕು?
ಎಂದು
ಪೊಲೀಸರು
ಕಾನೂನು
ಇಲಾಖೆಯ
ಸಲಹೆಯನ್ನು
ಕೇಳಿದ್ದಾರೆ.
[ಗಿರೀಶ್
ಕಾರ್ನಾಡ್
ಅವರಿಗೆ
ಜೀವ
ಬೆದರಿಕೆ
ಸಂದೇಶ]
ಬೆಂಗಳೂರು : ಬೆಂಗಳೂರಿನಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ದೂರು ದಾಖಲಾಗಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಕಾರ್ನಾಡ್ ಅವರು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. [ಕ್ಷಮೆ ಯಾಚಿಸಿದ ಗಿರೀಶ್ ಕಾರ್ನಾಡ್]
ಮಂಡ್ಯ : ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಿರೀಶ್ ಕಾರ್ನಾಡ್ ಸೇರಿದಂತೆ ಇತರ ಮೂವರ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರು ಈ ದೂರು ನೀಡಿದ್ದಾರೆ. ಕಾರ್ನಾಡ್ ಅವರ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಕಾನೂನು ಅಭಿಪ್ರಾಯವೇಕೆ? : 'ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು' ಎಂಬುದು ಗಿರೀಶ್ ಕಾರ್ನಾಡ್ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದ್ದರಿಂದ, ಈ ವಿಚಾರದಲ್ಲಿ ಹೇಗೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಕಾನೂನು ಇಲಾಖೆ ಸಲಹೆ ಕೇಳಲಾಗಿದೆ.
ಕ್ಷಮೆ ಕೇಳಿದ್ದಾರೆ? : ತಮ್ಮ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾದ ಕಾರಣ ಗಿರೀಶ್ ಕಾರ್ನಾಡ್ ಕ್ಷಮೆ ಕೇಳಿದ್ದಾರೆ. 'ತಾವು ದುರುದ್ದೇಶದಿಂದ ಈ ಹೇಳಿಕೆ ನೀಡಿರಲಿಲ್ಲ. ನಾನು ನೀಡಿರುವ ಹೇಳಿಕೆಯಿಂದಾಗಿ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ' ಎಂದು ಕಾರ್ನಾಡ್ ಬುಧವಾರ ಕ್ಷಮೆ ಯಾಚಿಸಿದ್ದಾರೆ.