ಸಂಸದೀಯ ಕಾರ್ಯದರ್ಶಿಯಾಗಿ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್
ಉಡುಪಿ, ನವೆಂಬರ್, 24: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಸದೀಯ ಕಾರ್ಯದರ್ಶಿಗಳ ಸಂಪುಟದಲ್ಲಿ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇವರ ಸೇರ್ಪಡೆಯಿಂದ ರಾಜ್ಯ ಸರ್ಕಾರದಲ್ಲೀನ ಸಂಸದೀಯ ಕಾರ್ಯದರ್ಶಿಗಳ ಸಂಖ್ಯೆ ಹನ್ನೊಂದಕ್ಕೆ ಏರಿದೆ.
ಕರಾವಳಿಯ ಇಬ್ಬರು ಶಾಸಕರಾದ ಪ್ರಮೋದ್ ಮಧ್ವರಾಜ್ ಹಾಗೂ ಪುತ್ತೂರು ಶಾಸಕಿ ಶಕುಂತಾಳ ಶೆಟ್ಟಿ ಸೇರಿದಂತೆ ಒಟ್ಟು 9 ಮಂದಿ ಸೋಮವಾರ ಸಂಜೆ ವಿಧಾನ ಸೌಧದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಠಡಿಯಲ್ಲಿ ನಡೆದ ಸಮಾರಂಭದಲ್ಲಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.[ಬಂಡವಾಳ ಆಕರ್ಷಣೆಗೆ ಅಮೆರಿಕಾದಲ್ಲಿ ಸಿದ್ದು ರೋಡ್ ಶೋ]
ಸಂಸದೀಯ ಕಾರ್ಯದರ್ಶಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಷ್ಠಾನಕ್ಕೆ ತಂದ ಕಾರ್ಯಗಳನ್ನು ಶೀಘ್ರದಲ್ಲಿ ಜಾರಿಗೆ ತರಲು ಸಿಎಂ. ಸಿದ್ದರಾಮಯ್ಯನವರು ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಟಿ.ಬಿ ಜಯಚಂದ್ರ, ಲೋಕೋಪಯೋಗಿ ಸಚಿವ ಎಚ್. ಸಿ ಮಹದೇವಪ್ಪ, ಸಹಕಾರ ಮತ್ತು ಸಕ್ಕರೆ ಸಚಿವ ಎಚ್. ಎಸ್ ಮಹದೇವ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್ ರೋಷನ್ ಬೇಗ್ ಮತ್ತಿತರ ಗಣ್ಯರು ಹಾಜರಿದ್ದರು.