ನ್ಯಾ. ವಿಶ್ವನಾಥ್ ಶೆಟ್ಟಿ ಹೊಸ ಲೋಕಾಯುಕ್ತ
ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಯವರನ್ನು ನೇಮಕ ಮಾಡಿ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಬೆಂಗಳೂರು, ಜನವರಿ 26: ಲೋಕಾಯುಕ್ತ ಸಂಸ್ಥೆಗೆ ಕೊನೆಗೂ ದಂಡ ನಾಯಕರೊಬ್ಬರು ಸಿಕ್ಕಿದ್ದಾರೆ. ನ್ಯಾಯಮೂರ್ತಿ ಭಾಸ್ಕರ್ ರಾವ್ ರಿಂದ ತೆರವಾಗಿದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ನೇಮಕವಾಗಿದ್ದಾರೆ. ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಇಂದು ಸಹಿ ಹಾಕಿದ್ದು, ಶೆಟ್ಟಿ ಹೊಸ ಲೋಕಾಯುಕ್ತರಾಗಿದ್ದಾರೆ.
ಈ ಹಿಂದೆ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ಲೋಕಾಯುಕ್ತರು ಸಹಿ ಹಾಕಲು ಹಿಂದೇಟು ಹಾಕಿದ್ದರು. ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದಿರುವ ವಿಚಾರದಲ್ಲಿ ವಿಶ್ವನಾಥ್ ಶೆಟ್ಟಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.['ಲೋಕಾಯುಕ್ತ ಸಂಸ್ಥೆ ಮುಚ್ಚಲು ಸರ್ಕಾರದ ಷಡ್ಯಂತ್ರ']
ಆದರೆ ರಾಜ್ಯಪಾಲ ವಜೂಭಾಯಿ ವಾಲಾರನ್ನು ಕೆಲವು ದಿನಗಳ ಹಿಂದೆ ಭೇಟಿಯಾಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, 'ಬಹುತೇಕ ನ್ಯಾಯಮೂರ್ತಿಗಳು ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಪಡೆದಿದ್ದಾರೆ. ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲ. ಎಂದು ವಿವರಣೆ ನೀಡಿದ್ದರು.[ಲೋಕಾಯುಕ್ತ ಹುದ್ದೆಗೇರಲಿರುವ ನ್ಯಾ.ವಿಶ್ವನಾಥ್ ಶೆಟ್ಟಿ ವ್ಯಕ್ತಿಚಿತ್ರ]
ಇದೀಗ ರಾಜ್ಯಪಾಲರು ಸರಕಾರದ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಪ್ರತಿಷ್ಠಿತ ಲೋಕಾಯುಕ್ತ ಸಂಸ್ಥೆಯ ಮುಖ್ಯಸ್ಥರ ಹುದ್ದೆಗೆ ಕೊನೆಗೂ ಒಬ್ಬರ ನೇಮಕವಾಗಿದೆ.