ಕನಕಪುರದಲ್ಲಿ ಕರಡಿಗಳನ್ನು ಕೊಂದವರ್ಯಾರು?
ರಾಮನಗರ ಜಿಲ್ಲೆ ವ್ಯಾಪ್ತಿಯ ಕನಕಪುರದಲ್ಲಿ ಎರಡು ಕರಡಿಗಳು ಮೃತಪಟ್ಟಿವೆ. ವಿಷ ಹಾಕಿ ಅವುಗಳನ್ನು ಕೊಂದಿರಬಹುದು. ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹ.
ರಾಮನಗರ, ಜನವರಿ 6: ಎರಡು ಕರಡಿಗಳು ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಕಸಬಾ ಹೋಬಳಿ ತಾಮಸಂದ್ರ ಗ್ರಾಮದ ಬಳಿ ಬೆಳಕಿಗೆ ಬಂದಿದ್ದು, ಇವು ವಿಷ ಪ್ರಾಶನದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತಪಟ್ಟ ಕರಡಿಗಳ ಪೈಕಿ ಒಂದು ಏಳು ವರ್ಷದ ಹೆಣ್ಣು, ಮತ್ತೊಂದು ನಾಲ್ಕು ವರ್ಷದ ಗಂಡು ಕರಡಿಯಾಗಿವೆ.
ಮೇಲ್ನೋಟಕ್ಕಂತೂ ಇವುಗಳನ್ನು ಬೇಕಂತಲೇ ಸಾಯಿಸಿದಂತೆ ಕಂಡುಬರುತ್ತಿಲ್ಲ. ಇವುಗಳ ದೇಹದ ಮೇಲೆ ಯಾವುದೇ ಗಾಯಗಳಿಲ್ಲ. ಹೀಗಾಗಿ ಇವು ವಿಷ ಪ್ರಾಶನದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಕಾಡುಹಂದಿಗಳು ಹೆಚ್ಚಾಗಿದ್ದು, ಇವುಗಳನ್ನು ಬೇಟೆಯಾಡುವ ಸಲುವಾಗಿ ಕೆಲವು ಬೇಟೆಗಾರರು ವಿಷ ಬೆರೆಸಿಟ್ಟಿದ್ದು, ಅದನ್ನು ಕರಡಿಗಳು ಸೇವಿಸಿ ಮೃತಪಟ್ಟ ಸಾಧ್ಯತೆ ಹೆಚ್ಚಾಗಿದೆ.[ಮೈಸೂರು ಮೃಗಾಲಯದಲ್ಲಿ ಮತ್ತೊಂದು ಪಕ್ಷಿ ಸಾವು]

ಇಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ಅರಣ್ಯದಿಂದ ನಾಡಿನತ್ತ ಬರುವ ವನ್ಯಪ್ರಾಣಿಗಳಿಗೆ ಅದರಲ್ಲೂ ಕಾಡುಹಂದಿಗಳನ್ನು ಬೇಟೆಯಾಡುವ ಸಲುವಾಗಿ ಕೆಲವರು ಹೊಂಚು ಹಾಕುತ್ತಿರುತ್ತಾರೆ. ಬಹುಶಃ ಅವರು ಕಾಡುಹಂದಿಗಳನ್ನು ಸೆರೆ ಹಿಡಿಯುವ ಸಲುವಾಗಿ ವಿಷವನ್ನು ಆಹಾರದಲ್ಲಿ ಬೆರೆಸಿಟ್ಟಿರಬಹುದು. ಅದನ್ನು ಕರಡಿಗಳು ಸೇವಿಸಿ ಸಾವನ್ನಪ್ಪಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆ ಬಳಿಕ ಇವುಗಳ ಸಾವಿಗೆ ನಿಖರ ಮಾಹಿತಿ ಲಭ್ಯವಾಗಬೇಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಸಂಬಂಧ ತನಿಖೆ ಕೈಕೊಂಡಿದ್ದಾರೆ. ಒಂದು ವೇಳೆ ವಿಷ ಬೆರೆಸಿಟ್ಟು ಪ್ರಾಣಿಗಳನ್ನು ಬೇಟೆಯಾಡುವುದು ನಿಜವಾಗಿದ್ದರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.[ಸಾರ್ವಜನಿಕರಿಗೆ ಫೆಬ್ರವರಿ 2ರವರೆಗೆ ಮೈಸೂರು ಮೃಗಾಲಯ ಪ್ರವೇಶವಿಲ್ಲ]
ಉಪ ಸಂರಕ್ಷಣಾ ವಲಯ ಅರಣ್ಯಾಧಿಕಾರಿ ವೆಂಕಟೇಶ್, ಕನಕಪುರ ವಲಯ ಅರಣ್ಯಾಧಿಕಾರಿ ದಿನೇಶ್, ಪುಟ್ಟಸ್ವಾಮಿ, ಅರಣ್ಯ ರಕ್ಷಕ ಮುತ್ತುನಾಯಕ್ ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಶವ ಪರೀಕ್ಷೆ ನಂತರ ಅಂತ್ಯಕ್ರಿಯೆ ನಡೆಸಲಾಯಿತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications