ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿಗೆ ಭೂಸೇನೆಯ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್?

By ನಮ್ಮ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 31: ಭಾರತೀಯ ಭೂಸೇನೆಯ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಅವರು ಕೊಡಗಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.ಆದರೆ, ಇನ್ನೂ ಪ್ರವಾಸ ಕಾರ್ಯಕ್ರಮದ ವಿವರಗಳು ಲಭ್ಯವಾಗಿಲ್ಲ.

ಮೂಲಗಳ ಪ್ರಕಾರ ಜಿಲ್ಲೆಗೆ ಆಗಮಿಸುವ ಅವರು ಆಗಸ್ಟ್ 5ರಿಂದ 7ರ ತನಕ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ. ಭಾರತೀಯ ಸೇನೆಯ ಎಂಇಜಿ ವಿಭಾಗದ ವತಿಯಿಂದ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಿವೃತ್ತ ಯೋಧರ Rally ಕಾರ್ಯಕ್ರಮ ಆ.6ರಂದು ನಡೆಯಲಿದ್ದು ಆ Rallyಯಲ್ಲಿ ಸೇನಾ ಮುಖ್ಯಸ್ಥರು ಭಾಗವಹಿಸುವ ಸಾಧ್ಯತೆ ಎನ್ನಲಾಗಿದೆ. [ಭೂಸೇನಾ ಮುಖ್ಯಸ್ಥ ದಲ್ ಬೀರ್ ಸಿಂಗ್ ಸುಹಾಗ್ ವ್ಯಕ್ತಿಚಿತ್ರ]

Army Chief Gen Dalbir Singh Suhag to visit Kodagu, Karnataka

ಭಾರತದ ಸೇನಾಪಡೆಗೆ ಪ್ರಥಮ ದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ವೀರ ಸೇನಾನಿ ಜನರಲ್ ತಿಮ್ಮಯ್ಯ ಸೇರಿದಂತೆ ಹಲವು ಮಹಾನ್ ವೀರಯೋಧರನ್ನು ನೀಡಿದ ಕೊಡಗಿಗೆ ಸೇನಾ ಮುಖ್ಯಸ್ಥರಾದ ಜನರಲ್ ದಲ್ಬೀರ್ ಸಿಂಗ್ ಅವರು ಆಗಮಿಸುತ್ತಿರುವುದು ಜಿಲ್ಲೆಯ ಯೋಧರಿಗೆ ಸಂತಸ ತಂದಿದೆ.

ಸೇನಾ ಮುಖ್ಯಸ್ಥರೊಂದಿಗೆ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸುವ ಸಾಧ್ಯತೆಯಿದೆ. ಅಧಿಕಾರಿಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

English summary
India Army Chief Gen Dalbir Singh Suhag to visit Madikeri on August 5 and stay till 7th in the district. Dalbir Singh Suhag likely to inaugurate the retired soldier's rally scheduled on August 6, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X