ಮಳೆಕಾಡಿನ ರಕ್ಷಣೆಗೆ ಮುಂದಾದ ಮಡಿಕೇರಿಯ ನರಿಕೊಡವ ರೈಡರ್ಸ್!
ಮಡಿಕೇರಿ, ಆಗಸ್ಟ್ 16: ಕೊಡಗಿನಲ್ಲಿ ಮರಕಾಡು ಕಡಿಮೆಯಾಗುತ್ತಿದೆ ಪರಿಣಾಮ ಮಳೆ ಕಡಿಮೆಯಾಗುತ್ತಿದೆ. ಇದನ್ನು ತಪ್ಪಿಸುವ ಸಲುವಾಗಿ ಕೆಲವು ಯುವಕರು ಟೀಂ ನರಿ ಕೊಡವ ರೈಡರ್ಸ್ ಗ್ರೂಪ್ ಮಾಡಿಕೊಂಡು ಗಿಡನೆಡುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಈಗಾಗಲೇ ಹಲವು ಕಡೆಗಳಲ್ಲಿ ಗಿಡನೆಡುವ ಮೂಲಕ ತಮ್ಮ ಚಟಿವಟಿಕೆಯನ್ನು ಆರಂಭಿಸಿದ್ದಾರೆ. ಜಿಲ್ಲೆಯಲ್ಲಿ ಹಲವು ಸಂಘ ಸಂಸ್ಥೆಗಳಿದ್ದರೂ ಹೆಚ್ಚಿನ ಸಂಸ್ಥೆಗಳು ಕೇವಲ ಕ್ರೀಡಾಕೂಟ ಇನ್ನಿತರ ಚಟುವಟಿಕೆಗಳಲ್ಲಿ ಮಗ್ನವಾಗಿವೆ. ಆದರೆ ಪರಿಸರ ಕಾಳಜಿ ವಹಿಸುವ ಸಂಘಟನೆಗಳ ಅಗತ್ಯತೆ ಇಲ್ಲಿದೆ. ಹೀಗಾಗಿ ಪರಿಸರ ಕಾಳಜಿ ವಹಿಸುವ ಸಲುವಾಗಿಯೇ ಹುಟ್ಟಿಕೊಂಡ ಗ್ರೂಪ್ ಇದೀಗ ತನ್ನ ಕಾರ್ಯವೈಖರಿಯಿಂದ ಗಮನಸೆಳೆಯುತ್ತಿದೆ.

ಫೇಸ್ಬುಕ್, ವಾಟ್ಸಾಪ್ ಗಳಲ್ಲಿ ಗ್ರೂಪ್ ತೆರೆದು ತನ್ನ ಗ್ರೂಪ್ ಬಗ್ಗೆ ಕಾಳಜಿ ಮೂಡಿಸುತ್ತಿದ್ದಾರೆ. ಕುಂಚೆಟ್ಟಿರ ಅರುಣ್ ಬೆಳ್ಯಪ್ಪ, ಕೆಚ್ಚಟಿರ ಮದನ್ ಮಾದಯ್ಯ, ಪೆಮ್ಮುಡಿಯಂಡ ಅಭಿಷೇಕ್ ಉತ್ತಪ್ಪ ಸೇರಿದಂತೆ 20 ಸದಸ್ಯರು ಗ್ರೂಪ್ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ಬುಲೇಟ್, ಜಾವ, ಎಜ್ಡಿ ಮೊದಲಾದ ಬೈಕ್ ಗಳಲ್ಲಿ ಕೊಡಗು ಮಾತ್ರವಲ್ಲದೆ, ಬೇರೆ ರಾಜ್ಯಗಳ ಪ್ರವಾಸಿತಾಣಗಳಿಗೆ ತೆರಳಿ ಅಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗ್ರತಿ ಮೂಡಿಸುತ್ತಿದ್ದಾರೆ.
ಮಡಿಕೇರಿ ಅರಣ್ಯಾಧಿಕಾರಿಗಳನ್ನು ಸಂಪರ್ಕಿಸಿ ಇಲಾಖಾ ವತಿಯಿಂದ ಮಾವು, ನೇರಳೆ, ನೆಲ್ಲಿಕಾಯಿ ಗಿಡಗಳನ್ನು ಪಡೆದು ಮಡಿಕೇರಿ ತಾಲೂಕು ಮಕ್ಕಂದೂರಿನ ಪುಟ್ಟ ಹಳ್ಳಿಯಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನೆಡುವ ಮೂಲಕ ತಮ್ಮ ಕಾರ್ಯ ಆರಂಭಿಸಿದ್ದಾರೆ.
ದಿನೇ ದಿನೇ ಒಂದಲ್ಲ ಒಂದು ರೀತಿಯಲ್ಲಿ ಕೊಡಗಿನ ಪರಿಸರದ ಮೇಲೆ ಹಾನಿಯಾಗುತ್ತಿದ್ದು, ಮರಕಾಡುಗಳು ನಶಿಸುತ್ತಿವೆ. ಗದ್ದೆಗಳು ಕಾಂಕ್ರಿಟ್ ಕಾಡುಗಳಾಗುತ್ತಿವೆ. ಇದು ಮುಂದುವರೆದರೆ ಭಾರೀ ಗಂಡಾಂತರಗಳನ್ನು ಎದುರಿಸುವುದು ನಿಶ್ಚಿತ. ಹೀಗಾಗಿ ಈಗಿನಿಂದಲೇ ಪರಿಸರದತ್ತ ಕಾಳಜಿ ವಹಿಸಿ ಗಿಡಮರಗಳನ್ನು ರಕ್ಷಿಸುವ ಅನಿವಾರ್ಯತೆಯಿದ್ದು ಅದರನ್ನು ನಮ್ಮ ಗ್ರೂಪ್ ಮಾಡುತ್ತಿದೆ ಗ್ರೂಪ್ ನ ಸಂಚಾಲಕ ಅಭಿಷೇಕ್ ಉತ್ತಪ್ಪ ಹೇಳಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications