ಸಿಟ್ಟಾಗದ ಸದಾನಂದ ಗೌಡರೇ ರಮ್ಯಾಗೆ ಎಂಥ ಪೆಟ್ಟು ಕೊಟ್ಟರು ನೋಡಿ..
ಸುಲಭಕ್ಕೆ ಸಿಟ್ಟು ಮಾಡಿಕೊಳ್ಳದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಮಾಜಿ ಸಂಸದೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಮ್ಯಾ ಮಾಡಿದ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ
ಮಂಡ್ಯ, ಮೇ 19: ಯಾವಾಗಲೂ ನಗುತ್ತಾ ಮಾತನಾಡುವ, ಅಪರೂಪಕ್ಕೆ ಎಂಬಂತೆ ಸಿಟ್ಟಾಗುವ ಕೇಂದ್ರ ಸಚಿವ ಡಿವಿ ಸದಾನಂದಗೌಡರು ಮಾಜಿ ಸಂಸದೆ-ನಟಿ ರಮ್ಯಾ ಮೇಲೆ ಸಿಟ್ಟಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರೋ ಬಾಯಿ ಚಪಲಕ್ಕೆ ಮಾತನಾಡ್ತಾರೆ. ಅವರಿಗೆಲ್ಲ ನಾನ್ಯಾಕೆ ಉತ್ತರ ಕೊಡಬೇಕು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಮ್ಯಾ ಮಾಡಿದ ಟೀಕೆಗೆ ಖಾರವಾಗಿ ಉತ್ತರ ನೀಡಿದ ಅವರು, ರಮ್ಯಾ ಅವರ ಪಕ್ಷದ ದೊಡ್ಡ ನಾಯಕ ರಾಹುಲ್ ಗಾಂಧಿ ಕೂಡ ಇದು ಸೂಟು-ಬೂಟಿನ ಸರಕಾರ ಎಂದರು. ಇತ್ತೀಚಿನ ಚುನಾವಣೆ ಫಲಿತಾಂಶಗಳಲ್ಲಿ ಜನಾದೇಶವೇ ಅಂತಿಮ ಎಂಬುದು ಗೊತ್ತಾಗಿದೆ ಎಂದು ಡಿವಿಎಸ್ ಹೇಳಿದರು.[ರಮ್ಯಾಗೆ ಲಾಲಿಪಪ್ ಕಳಿಸಿದ ಬಿಜೆಪಿ ಕಾರ್ಯಕರ್ತರು]

ಜನಾದೇಶದ ವಿರುದ್ಧ ಮಾತನಾಡುವವರು ತಲೆಹರಟೆಗಾಗಿ ಏನೋ ಮಾತನಾಡುತ್ತಾರೆ. ಇದೆಲ್ಲ ಚಟ ತೀರಿಸಿಕೊಳ್ಳುವವರ ಸಣ್ಣ ಮಾತುಗಳು ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಟೀಕಿಸುವವರು ಬೇಕಾದ್ದನ್ನು ಮಾತನಾಡಿಕೊಳ್ಳಲಿ ಎಂದು ಹೇಳಿದರು.[ಮೂರು ವರ್ಷದಲ್ಲಿ ದೇಶವನ್ನು ಹಳ್ಳ ಹಿಡಿಸಿದ ಮೋದಿ -ಕಾಂಗ್ರೆಸ್]

ಇನ್ನು ಕುಲಭೂಷಣ್ ಜಾಧವ್ ತೀರ್ಪಿನ ಬಗ್ಗೆ ಮಾತನಾಡಿ, ನಮಗೆ ಸಿಕ್ಕಿರುವುದು ತಾತ್ಕಾಲಿಕ ಜಯ. ಪಾಕಿಸ್ತಾನದ ಆರೋಪದಲ್ಲಿ ಸತ್ಯವಿಲ್ಲ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಈ ತೀರ್ಪಿನ ಮೂಲಕ ಪಾಕ್ ನ ದುಷ್ಕೃತ್ಯಗಳಿಗೆ ಕೊನೆ ಹೇಳಲಾಗುವುದು ಎಂದು ಅವರು ಹೇಳಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications