ರಮ್ಯಾಗೆ ಲಾಲಿಪಪ್ ಕಳಿಸಿದ ಬಿಜೆಪಿ ಕಾರ್ಯಕರ್ತರು
ನಟಿ-ಮಾಜಿ ಸಂಸದೆ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟೀಕೆಗೆ ಪ್ರತಿಕ್ರಿಯಿಸಿರುವ ಮಂಡ್ಯದ ಬಿಜೆಪಿ ಕಾರ್ಯಕರ್ತರು ಮಕ್ಕಳು ತಿನ್ನುವ ಸಿಹಿ ತಿನಿಸನ್ನು ಪೋಸ್ಟ್ ಮೂಲಕ ಕಳುಹಿಸಿದ್ದಾರೆ
ಮಂಡ್ಯ, ಮೇ 18: ಮಾಜಿ ಸಂಸದೆ-ನಟಿ, ಈಗಷ್ಟೇ ಕಾಂಗ್ರೆಸ್ ನಲ್ಲಿ ಹೊಸ ಜವಾಭ್ದಾರಿ ವಹಿಸಿಕೂಂಡಿರುವ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ಮಕ್ಕಳು ತಿನ್ನುವ ಸಿಹಿ ತಿನಿಸನ್ನು ಪೋಸ್ಟ್ ಮೂಲಕ ಕಳುಹಿಸಿ ವ್ಯಂಗ್ಯವಾಡಲಾಗಿದೆ. ಇದು ಒಂದು ರೀತಿ ರಮ್ಯಾ ಅವರಿಗೆ ತಿರುಗೇಟು ನೀಡುವ ಪ್ರಯತ್ನದಂತೆ ಕಾಣುತ್ತಿದೆ. ಏಕೆಂದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಮ್ಯಾ ಟೀಕೆ ಮಾಡಿದ್ದರು.
ಮೋದಿ ಸರಕಾರದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ. ದೇಶದಲ್ಲಿ ಬರಗಾಲ ವಿಪರೀತವಾಗಿ ಇರುವ ವೇಳೆಯಲ್ಲೂ ಪ್ರಧಾನಿ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ರಮ್ಯಾ ಟೀಕೆ ಮಾಡಿದ್ದರು. ಈ ಎಲ್ಲ ಟೀಕೆಗಳಿಗೆ ಉತ್ತರ ಎಂಬಂತೆ ಬಿಜೆಪಿ ಕಾರ್ಯಕರ್ತರು ಅಣಕವಾಡಿದ್ದಾರೆ. ಸಾಮಾಜಿಕ ಜಾಲತಾಣ ನಿರ್ವಹಣೆ ಕುರಿತು ಬೇರೆ ಯಾವುದಾದರೂ ದೇಶದಿಂದ ತರಬೇತಿ ಪಡೆದುಕೊಳ್ಳಿ ಎಂದು ಕಾಲೆಳೆದಿದ್ದಾರೆ.[ಓದುಗರು ಕೇಳಿರುವ ಪ್ರಶ್ನೆಗಳಿಗೆ ರಮ್ಯಾ ಉತ್ತರಿಸುವರೆ?]

ಅಷ್ಟೇ ಅಲ್ಲ, ಮಕ್ಕಳು ತಿನ್ನುವ ಸಿಹಿ ತಿನಿಸನ್ನು ಪೋಸ್ಟ್ ಮೂಲಕ ಕಳುಹಿಸಿರುವ ಬಿಜೆಪಿ ಕಾರ್ಯಕರ್ತರಾದ ಮಂಜುನಾಥ್, ಶಿವಕುಮಾರ್ ಆರಾಧ್ಯ ರಮ್ಯಾಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿಯನ್ನು ಇತ್ತೀಚೆಗಷ್ಟೇ ವಹಿಸಿಕೊಂಡ ರಮ್ಯಾ ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡು, ಮಾಧ್ಯಮಗಳ ಮುಂದೆ ಬಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನ ಇಮೇಜ್ ಕಾಯ್ದುಕೊಂಡು, ನರೇಂದ್ರ ಮೋದಿ ನೇತೃತ್ವದ ಸರಕಾರದ ವಿರುದ್ಧ ಜನ ಜಾಗೃತಿ ಮೂಡಿಸುವ ಹೊಣೆ ಅವರ ಮೇಲಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications