ಕಾವೇರಿ ವಿವಾದ: ಮಂಡ್ಯ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್!
ಮಂಡ್ಯ, ಜುಲೈ 11 : ಕಾವೇರಿ ನೀರು ಹಂಚಿಕೆ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಒಂದೆಡೆ ವಿಚಾರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಂಡ್ಯ ನಗರ ಸೇರಿದಂತೆ ಕೆಆರ್ ಎಸ್ ಜಲಾಶಯದ ಬಳಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲೆಡೆ ಖಾಕಿಮಯವಾಗಿದೆ. ಅಷ್ಟೇ ಅಲ್ಲದೆ ಮಂಡ್ಯದಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಎಚ್ಚರಿಕೆ ನೀಡಿದರು.

ಕಾವೇರಿ ಹೋರಾಟಗಾರರ ರಸ್ತೆಗಿಳಿದು ಪ್ರತಿಭಟನೆ ನಡೆಸುವುದಲ್ಲದೆ, ಆಕ್ರೋಶಗೊಂಡು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಲ್ಲಿ ಅಂತಹವರ ವಿರುದ್ಧ 107 ಸಿಆರ್ ಪಿಸಿಯಡಿಯಲ್ಲಿ ಮೊಕದ್ದಮೆ ದಾಖಲು ಮಾಡಲು ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿರುವುದಾಗಿ ತಿಳಿದು ಬಂದಿದೆ.
ಒಂದು ವೇಳೆ ಆಕ್ರೋಶಿತರು ಮಂಡ್ಯ ನಗರದಲ್ಲಿರುವ ತಮಿಳು ಕಾಲೋನಿಗೆ ನುಗ್ಗಿ ತೊಂದರೆ ಕೊಡಬಹುದು ಎಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಕಾಲೋನಿಯಾದ್ಯಂತ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ಈ ನಡುವೆ ಜಿಲ್ಲೆಯ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ರೈತರು, ಹೋರಾಟಗಾರರ ಸಭೆ ನಡೆಸಲಾಗಿದ್ದು, ಸಾರ್ವಜನಿಕ, ಖಾಸಗಿ ಆಸ್ತಿ-ಪಾಸ್ತಿಗಳನ್ನು ನಾಶಪಡಿಸದಂತೆ ಹೋರಾಟಗಾರರಿಗೆ ಸೂಚಿಸಲಾಗಿದೆ.
ಮತ್ತೊಂದೆಡೆ ಕೆಆರ್ ಎಸ್ ಬೃಂದಾವನಕ್ಕೆ ಪ್ರವಾಸಿಗರನ್ನು ಬಿಡಲಾಗುತ್ತಿದೆಯಾದರೂ ಯಾವುದೇ ವೇಳೆಯಲ್ಲಿ ಪ್ರವೇಶವನ್ನು ನಿರ್ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬೇರೆಡೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆಯಿಸಿ ಬಂದೋಬಸ್ತ್ ಮಾಡಲಾಗಿದೆ.
ಮಂಡ್ಯದಲ್ಲಿ 10 ರಾಜ್ಯ ಸಶಸ್ತ್ರ ಮೀಸಲು ಪಡೆ ತುಕಡಿ, 25 ಜಿಲ್ಲಾ ಸಶಸ್ತ್ರ ಮೀಸಲು ಪಡೆ ತುಕಡಿ, 400 ಗೃಹ ರಕ್ಷಕ ದಳದ ಸಿಬ್ಬಂದಿ, 2 ಸಾವಿರ ಅಧಿಕಾರಿ ಮತ್ತು ಸಿಬ್ಬಂದಿ, 500 ಹೊರ ಜಿಲ್ಲೆ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಇನ್ನು ಕೆಆರ್ ಎಸ್ ಬಳಿ 6 ರಾಜ್ಯ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆ, 100ಕ್ಕೂ ಹೆಚ್ಚು ಮಂದಿ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದು, ಒಳಗಡೆ ಪ್ರವೇಶಿಸದಂತೆ ಬ್ಯಾರಿಕೇಡ್ ಹಾಕಿ ಕಾವಲು ಕಾಯಲಾಗುತ್ತಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications