ಮಹಾರಾಷ್ಟ್ರದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಮುಂಬೈ, ಜೂನ್ 22 : ಮಹಾರಾಷ್ಟ್ರದಲ್ಲಿ ಮತ್ತೆ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ ನೌಕಾಪಡೆ ಸುಮಾರು 17 ಗ್ರಾಮಗಳ ರೈತರ ನೂರಾರು ಎಕರೆ ಕೃಷಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದು ಆರೋಪಿಸಿ ನೂರಾರು ರೈತರು ಹೆದ್ದಾರಿ ತಡೆ ನಡೆಸಿದ್ದಾರೆ. ಈ ವೇಳೆ ಕೆಲ ಆಕ್ರೋಶಿತ ಕೆಲ ರೈತರು ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದರು. ಈ ಘಟನೆಯಲ್ಲಿ ಕೆಲ ಪೊಲೀಸರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಹಿನ್ನೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗಲಭೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
#Visuals from Thane-Badlapur highway where farmers protest turned violent, farmers say their land is being acquired by MoD. #Maharashtra pic.twitter.com/X5TgogeoMU
— ANI (@ANI_news) June 22, 2017
ಇನ್ನು ರೈತರ ಗಲಭೆ ನಿಯಂತ್ರಣಕ್ಕಾಗಿ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳಿಗೆ ಬುಲಾವ್ ನೀಡಲಾಗಿದ್ದು, ಶೀಘ್ರದಲ್ಲೇ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳು ರಕ್ಷಣೆ ನಿಯೋಜನೆಯಾಗಲಿವೆ ಎಂದು ತಿಳಿದುಬಂದಿದೆ.