ಧರ್ಮಸ್ಥಳದಲ್ಲಿ ಗೋಮಾಂಸ ಸಾಗಿಸುತ್ತಿದ್ದವರ ಬಂಧನ
ಮಂಗಳೂರು, ಜ. 9 : ಆಟೊ ರಿಕ್ಷಾವೊಂದರಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ರವಿವಾರ ತಡರಾತ್ರಿ ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ವಿಶ್ವನಾಥ್, ಜೋಸೆಫ್, ಜಾನ್ ಹಾಗೂ ಕಿಟ್ಟು ಮುಗೇರ ಬಂಧಿತ ಆರೋಪಿಗಳು. ಈ ಆರೋಪಿಗಳು ನಿನ್ನೆ ತಡರಾತ್ರಿ 1:30ರ ಸುಮಾರಿಗೆ ರಿಕ್ಷಾದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆಗಿಳಿದ ಧರ್ಮಸ್ಥಳ ಪೊಲೀಸರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ.
ಸ್ಥಳೀಯ ಬಜರಂಗ ದಳದ ಕಾರ್ಯಕರ್ತರು ನೀಡಿದ ಮಾಹಿತಿಯನ್ವಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರೆನ್ನಲಾಗಿದೆ. ಇದೇ ವೇಳೆ ಇಲ್ಲಿ ನಿರಂತರವಾಗಿ ಅಕ್ರಮ ಗೋಮಾಂಸ ಮಾರಾಟ ಕಾರ್ಯ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಬಜರಂಗ ದಳದ ಕಾರ್ಯಕರ್ತರೇ ದಾಳಿ ನಡೆಸಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ವದಂತಿಯೂ ಹರಡಿದೆ.
Comments
English summary
Four arrested for trafficking of beef meat in an auto rickshaw at dharmasthala.
Story first published: Monday, January 9, 2017, 13:23 [IST]