ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರಗಳಲ್ಲಿ: ಭಕ್ತಸಾಗರದ ನಡುವೆ ಮಂಗಳೂರಿನ 'ಕೊಡಿಯಾಲ್ ತೇರು'

|
Google Oneindia Kannada News

ಮಂಗಳೂರು, ಫೆ 15: ರಥ ಸಪ್ತಮಿಯ ಶುಭಾವಸರದಲ್ಲಿ, ಸಂಜೆ ಗೋಧೂಳಿಯ ಸಮಯದಲ್ಲಿ, ರಥಬೀದಿಯಲ್ಲಿ ರಂಗೇರಿದ ವಾತಾವರಣದಲ್ಲಿ, ಮಂಗಳೂರಿನ ವೆಂಕಟರಮಣ ದೇವಸ್ಥಾನದ ವೆಂಕಟೇಶ ದೇವರ ಬ್ರಹ್ಮರಥೋತ್ಸವ ಸಂಭ್ರಮದ 'ಕೊಡಿಯಾಲ್ ತೇರು' ಭಾನುವಾರ (ಫೆ 14) ಸಂಜೆ ಜರಗಿತು.

ರಥಬೀದಿಯ ತುಂಬೆಲ್ಲ ಜನಸಾಗರವೇ ಕಿಕ್ಕಿರಿದು ತುಂಬಿದಂತೆ ಉಕ್ಕಿ ಹರಿದ ಭಕ್ತ ಜನಸಾಗರದಲ್ಲಿ ಭಕ್ತಾದಿಗಳು ತಮ್ಮೊಡೆಯ ವೀರ ವೆಂಕಟೇಶನ ವೈಭವದ ರಥಾರೋಹಣ, ಮಹಾಪೂಜೆ ಸಹಿತ ರಥೋತ್ಸವ ವೈಭವಕ್ಕೆ ಸಾಕ್ಷಿಯಾದರು. (ಕಾಶೀಮಠಾಧೀಶರ ಮಂಗಳೂರು ಪುರಪ್ರವೇಶ)

Grand Mangaluru Venkataramana Temple Kodiyal Teru, a rathosava concluded

ಸಂಜೆ 5.30ರ ವೇಳೆಗೆ ಚಿನ್ನದ ಪಲ್ಲಕ್ಕಿಯೇರಿ ದೇವಳದಿಂದ ರಥದೆಡೆಗೆ ವೀರ ವೆಂಕಟೇಶ ದೇವರ ಆಗಮನದ ಬಳಿಕ ಸಾಂಪ್ರದಾಯಿಕ ರಥ ಪ್ರದಕ್ಷಿಣೆ ನಡೆಯಿತು. ಪಲ್ಲಕ್ಕಿಯನ್ನು ಏಕ ಹಸ್ತದಿಂದ ಏರಿಸಿ ಸಂಭ್ರಮಿಸಲಾಯಿತು.

Grand Mangaluru Venkataramana Temple Kodiyal Teru, a rathosava concluded

ಬ್ಯಾಂಡ್ ವಾದ್ಯಗಳ ಅಬ್ಬರ, ಮಂಗಳ ವಾದ್ಯಗಳ ನಿನಾದ, ತಾಳ ಸಂಕೀರ್ತನೆಯ ಹಿನ್ನೆಲೆಯಲ್ಲಿ ಸೇರಿದ ಸಹಸ್ರಾರು ಭಕ್ತಾದಿಗಳು ಹರ್ಷೋದ್ಗಾರಗಳ ನಡುವೆ ಸಂಜೆ 6.05 ರ ವೇಳೆಗೆ ಶ್ರೀದೇವರ ರಥಾರೋಹಣ ನಡೆಯಿತು.

ಈ ಸಂದರ್ಭದಲ್ಲಿ ಭಕ್ತಾದಿಗಳು ವೀರವೆಂಕಟೇಶಾ.. ವೇದವ್ಯಾಸಾ.. ಗೋವಿಂದೋ.. ಎಂದು ಜಯಘೋಷಗೈದರು. ಕಾಶೀಮಠಾಧೀಶರಾದ ಸಂಯಮೀಂದ್ರ ತೀರ್ಥರು ಈ ಸಂದರ್ಭದಲ್ಲಿ ರಥಕ್ಕೆ ಚಿತ್ತೈಸಿ ರಥಾರೂಢ ವೀರ ವೆಂಕಟೇಶನಿಗೆ ಮಹಾಮಂಗಳಾರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.

Grand Mangaluru Venkataramana Temple Kodiyal Teru, a rathosava concluded

ಸಮಾಜದ ಪರವಾಗಿ ಶ್ರೀ ದೇವಳದ ಆಡಳಿತ ಮೊಕ್ತೇಸರ ಪದ್ಮನಾಭ ಪೈ ಸಹಿತ ಮೊಕ್ತೇಸರರು ಶ್ರೀಗಳವರಿಂದ ಮಹಾಪ್ರಸಾದ ವನ್ನು ಸ್ವೀಕರಿಸಿದರು. ದಾನಿ ಮುಂಡ್ಕೂರು ರಾಮದಾಸ ಕಾಮತ್ ಸಹಿತ ಗಣ್ಯರಿಗೆ ಈ ಸಂದರ್ಭದಲ್ಲಿ ಪ್ರಸಾದ ನೀಡಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ವಿಧಾನಸಭಾ ಮಾಜಿ ಉಪಸಭಾಪತಿ ಎನ್.ಯೋಗೀಶ್ ಭಟ್ ಮತ್ತಿತರ ಗಣ್ಯರು ಈ ಸಂಧರ್ಭದಲ್ಲಿ ಹಾಜರಿದ್ದರು. (ನಮ್ಮೂರ ಹಬ್ಬದಲ್ಲಿ ನಮ್ಮ ಕುಡ್ಲದ ಗೊಬ್ಬುಲು)

Grand Mangaluru Venkataramana Temple Kodiyal Teru, a rathosava concluded

ಮಹೋತ್ಸವದ ಅಂಗವಾಗಿ ಶ್ರೀದೇವರಿಗೆ ದೇವಳದಲ್ಲಿ ವಿಶೇಷ ಗಂಗಾಭಿಷೇಕ, ಪುಳಕಾಭಿಷೇಕ ಸಹಿತ ಸಹಸ್ರಧಾರಾ ಸೇವೆ ಸಹಿತ ಧಾರ್ಮಿಕ ವಿದಿವಿಧಾನಗಳು ನಡೆದವು. ಸಂಜೆ ಮಹಾಯಜ್ಞ ಮಂಟಪದಲ್ಲಿ ಪೂರ್ಣಾಹುತಿ ಶ್ರೀಗಳವರ ಉಪಸ್ಥಿತಿಯಲ್ಲಿ ನಡೆಯಿತು.

ಸಂಜೆ ರಥದಲ್ಲಿ ಸಮಾಜ ಬಾಂಧವರು ಮಹಾಪ್ರಸಾದ ಸ್ವೀಕರಿಸಿದರು. ಇದಕ್ಕೂ ಮೊದಲು ರಥದ ಚಕ್ರಕ್ಕೆ ಕಾಯಿಗಳನ್ನು ಒಡೆಯುವ, ಸೇರಿದವರು ರಥವನ್ನು ಕರ ಸೇವೆಯ ಮೂಲಕ ಒಂದಿಷ್ಟು ಮುಂದಿಡುವ ಕ್ರಿಯೆಗಳು ನಡೆದವು.

Grand Mangaluru Venkataramana Temple Kodiyal Teru, a rathosava concluded

ದೇಶವಿದೇಶಗಳಿಂದ ರಥೋತ್ಸವ ಸಂಭ್ರಮಕ್ಕೆಂದೇ ಆಗಮಿಸಿದ್ದ ಜನತೆ ಕೊಡಿಯಾಲ್ ತೇರಿನ ವೈಭವವನ್ನು ಕಣ್ತುಂಬಿಕೊಂಡರು. ಇದೇ ವೇಳೆ ಮಹಾ ಸಮಾರಾಧನೆಯಲ್ಲಿ 35 ಸಹಸ್ರಕ್ಕೂ ಅಧಿಕ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. ರಾತ್ರಿ ರಥೋತ್ಸವ ಕಾರ್ಯಕ್ರಮಗಳು ಜರಗಿದವು.

ಈ ಬಾರಿಯ ಕೊಡಿಯಾಲ್ ತೇರು ಸಂಭ್ರಮಕ್ಕೆ ಕಾಶೀಮಠಾಧೀಶರ ಉಪಸ್ಥಿತಿ ವಿಶೇಷ ರಂಗೇರಿಸಿತು. ಶ್ರೀ ಸಂಸ್ಥಾನದ 21ನೇ ಪೀಠಾಧಿಪತಿಯಾಗಿ ಇತ್ತೀಚಿಗಷ್ಟೇ ಪೀಠಾರೋಹಣಗೈದಿದ್ದ ಶ್ರೀಗಳವರರಿಗೆ ಆ ಬಳಿಕ ಇದು ಮೊದಲ ರಥೋತ್ಸವ ಸಂಭ್ರಮ.

Grand Mangaluru Venkataramana Temple Kodiyal Teru, a rathosava concluded

ಶ್ರೀ ವೆಂಕಟರಮಣ ದೇವಳವೂ ಶ್ರೀ ಸಂಸ್ಥಾನದ ಅಧೀನದಲ್ಲಿದ್ದು ಪೀಠಾರೋಹಣದ ಬಳಿಕ ಶನಿವಾರ ಸಂಜೆ ಮೊದಲ ಪುರ ಪ್ರವೇಶ, ದೇವಳದಲ್ಲಿ ಮೊದಲ ಮೊಕ್ಕಾಂ ನಡೆಸಿದ್ದು ಗುರುವರ್ಯರ ಅಮೃತ ಹಸ್ತಗಳಿಂದ ಮಹಾಪೂಜೆ, ಮಹಾಪ್ರಸಾದ ಪಡೆದ ಧನ್ಯತೆ ಮಂಗಳೂರು ದೇವಳದ ಭಕ್ತಾದಿಗಳದ್ದಾಗಿದೆ. (ಚಿತ್ರ : ಮಂಜು ನೀರೆಶ್ವಾಲ್ಲ್ಯ)

English summary
Grand Mangaluru Venkataramana Temple 'Kodiyal Teru', a Brahma Rathosava religious festival concluded in Mangaluru on Feb 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X