ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಹಿಜಾಮಾ ಚಿಕಿತ್ಸೆ ಆರಂಭ
ಮೂಲತಃ ಮಧ್ಯ ಪ್ರಾಚ್ಯ ದೇಶಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಲ್ಲಿರುವ ಹಿಜಾಮಾ ಚಿಕಿತ್ಸೆಯನ್ನು ಮಂಗಳೂರಿನಲ್ಲೂ ಮಾಡಲಾಗುತ್ತಿದೆ. ಬಡವರಿಗೆ ಕೈಗೆಟುಕುವ ದರದಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಗೆ ಜನ ಕೂಡಾ ಪ್ರಭಾವಿತರಾಗಿದ್ದಾರೆ.
ಮಂಗಳೂರು, ಮೇ 15: ವೆನ್ಲಾಕ್ ಆಸ್ಪತ್ರೆ ಅವ್ಯವಸ್ಥೆ ಗೋಳು ಎಂದು ಕೂಗಿಕೊಳ್ಳುವ ಮಂದಿಗೆ ಇಲ್ಲಿ ಅತ್ಯುತ್ತಮ ಚಿಕಿತ್ಸಾ ಸೌಲಭ್ಯಗಳಿವೆ ಅನ್ನುವ ವಿಚಾರ ಗೊತ್ತಿಲ್ಲ. ಬ್ರಿಟಿಷರು ನಿರ್ಮಿಸಿದ್ದ ಈ ಸೇನಾ ಆಸ್ಪತ್ರೆ ಅಂದಿನ ಕಾಲದಲ್ಲಿ ಸೈನಿಕರಿಗೆ ಚಿಕಿತ್ಸೆ ನೀಡುತ್ತಿತ್ತು. ಇದೀಗ ಸಹಸ್ರಾರು ಜನರಿಗೆ ಉಚಿತ ಚಿಕಿತ್ಸೆ ನೀಡುವ ರಾಜ್ಯದ ಅತೀ ಉತ್ತಮ ಸರ್ಕಾರಿ ಆಸ್ಪತ್ರೆಯಾಗಿ ವೆನ್ಲಾಕ್ ಹೆಸರು ಮಾಡಿದೆ.
ಪ್ರತಿನಿತ್ಯ ಸಾವಿರಕ್ಕೂ ಅಧಿಕ ರೋಗಿಗಳು ಹೊರ ಮತ್ತು ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುವ ಇಲ್ಲಿ ಹೊಸ ರೀತಿಯ ವಿದೇಶಿ ಚಿಕಿತ್ಸೆಯನ್ನು ಪರಿಚಯಿಸಲಾಗಿದೆ. ಅದು 'ಹಿಜಾಮಾ' ಚಿಕಿತ್ಸೆ. ಮೂಲತಃ ಮಧ್ಯ ಪ್ರಾಚ್ಯ ದೇಶಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಲ್ಲಿರುವ ಹಿಜಾಮಾ ಚಿಕಿತ್ಸೆಯನ್ನು ಮಂಗಳೂರಿನಲ್ಲೂ ಮಾಡಲಾಗುತ್ತಿದೆ. ಬಡವರಿಗೆ ಕೈಗೆಟುಕುವ ದರದಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಗೆ ಜನ ಕೂಡಾ ಪ್ರಭಾವಿತರಾಗಿದ್ದು, ತಿಂಗಳಲ್ಲಿ ಮುನ್ನೂರಕ್ಕಿಂತ ಹೆಚ್ಚು ಜನ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.[ಹೆಚ್ಚುತ್ತಿರುವ ರೋಗಿಗಳು, ವೆನ್ಲಾಕ್ ಐಸಿಯುನಲ್ಲಿ ಬೆಡ್ ಕೊರತೆ]

ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ರಕ್ತ ಸಂಬಂಧಿ, ಚರ್ಮ ಸಂಬಂಧಿ ಕಾಯಿಲೆಗಳಿಗೆ ಹಿಜಾಮಾ ಚಿಕಿತ್ಸೆ ರಾಮಬಾಣವಾಗಿದ್ದು, ಅರಬ್ ದೇಶಗಳಲ್ಲಿ ಹೆಚ್ಚು ಪ್ರಚಲಿತದಲ್ಲಿ ಇರುವುದರಿಂದ ಚಿಕಿತ್ಸೆಯ ಹೆಸರೂ ಅರಬ್ ಭಾಷೆಯ ಹಿಜಾಮಾ ಎಂಬ ಹೆಸರಿನಲ್ಲಿದೆ. ಕೆಟ್ಟ ರಕ್ತವನ್ನು ದೇಹದಿಂದ ಹೀರಿ ತೆಗೆಯುವ ಈ ಚಿಕಿತ್ಸಾ ವಿಧಾನದಲ್ಲಿ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಮಾನಸಿಕ ನೆಮ್ಮದಿಗೆ, ಸಂಧಿ ಸೆಳೆತ, ನರಗಳ ನೋವಿಗೆ ಹಿಜಾಮಾ ಚಿಕಿತ್ಸೆ ವೇಗದ ಪರಿಹಾರ ನೀಡುತ್ತದೆ ಎಂದು ಹೇಳುತ್ತಾರೆ ಆಯುಷ್ ತಜ್ಞರಾಗಿರುವ ಸೈಯದ್ ಮಹಮ್ಮದ್.

ಕೇವಲ ರೋಗಿಗಳಿಗಷ್ಟೇ ಅಲ್ಲದೆ ಉತ್ತಮ ಆರೋಗ್ಯವುಳ್ಳ ವ್ಯಕ್ತಿಗಳೂ ಹಿಜಾಮಾ ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ಮಂಗಳೂರು ಸೇರಿದಂತೆ ರಾಜ್ಯದ ಕೆಲವೇ ಕೆಲವು ಕಡೆ ಹಿಜಾಮಾ ಚಿಕಿತ್ಸೆ ಲಭ್ಯವಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ಚಿಕಿತ್ಸಾ ಸೌಲಭ್ಯ ದೊರೆಯುತ್ತಿರುವುದಕ್ಕೆ ಮಂಗಳೂರಿನ ಜನರಷ್ಟೇ ಅಲ್ಲದೆ ಹೊರ ಜಿಲ್ಲೆಯ ರೋಗಿಗಳೂ ಹರ್ಷ ವ್ಯಕ್ತಪಡಿಸಿದ್ದಾರೆ. ಬೇಡದಿದ್ದರೂ ಸ್ಕ್ಯಾನಿಂಗ್, ಎಕ್ಸರೇ ಎಂದು ಹೇಳಿ ಲಕ್ಷ ಲಕ್ಷ ದುಡ್ಡು ಬಾಚುವ ಖಾಸಗಿ ಆಸ್ಪತ್ರೆಗಳ ಮಧ್ಯೆ, ಯಾವುದೇ ಖರ್ಚಿಲ್ಲದೇ ಅತ್ಯುತ್ತಮ ಚಿಕಿತ್ಸೆ ಆರಂಭಿಸಿರುವ ಸರಕಾರಿ ಆಸ್ಪತ್ರೆಯ ನಡೆ ಅಭಿನಂದನೀಯ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications