'ಆಳ್ವರೊಂದಿಗೆ ನಾವು' ಕಾರ್ಯಕ್ರಮಕ್ಕೆ ಅಡ್ಡಿ, ಮೂವರ ಬಂಧನ
ಮಂಗಳೂರು, ಆಗಸ್ಟ್ 10 : 'ನುಡಸಿರಿಯ ದ್ವನಿ ಆಳ್ವರೊಂದಿಗೆ ನಾವು' ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿಂದೂ ಮಹಾಸಭಾದ ಕಾರ್ಯಕರ್ತರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ 'ನುಡಸಿರಿಯ ದ್ವನಿ ಆಳ್ವರೊಂದಿಗೆ ನಾವು' ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಹಿಂದೂ ಮಹಾಸಭಾದ ಕಾರ್ಯಕರ್ತರು ಯತ್ನಿಸಿದರು. ಈ ಸಂದರ್ಭದಲ್ಲಿ ಪೋಲೀಸರು ಮೂವರು ಹಿಂದೂ ಮಹಾಸಭಾ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಈ ವೇಳೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಅನುಮಾನಾಸ್ಪದ ಸಾವಿನ ಪ್ರಕರಣದ ಪಾರದರ್ಶಕ ತನಿಖೆಗೆ ಒತ್ತಾಯಿಸಿದರು ಇನ್ನೊಂದೆಡೆ ಇದೀಗ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವ ಪರ ವಿರೋಧ ಅಭಿಪ್ರಾಯಗಳು ಘರ್ಷಣೆಯ ಹಂತಕ್ಕೆ ತಲುಪಿದೆ.
ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ರೀಡಾ ಸಾಧಕ-ಸಂಘಟಕರ ಕರೆ ಎನ್ನುವ ವೇದಿಕೆಯು ಇಂದು ಮಂಗಳೂರಿನ ಪುರಭವನದಲ್ಲಿ ನುಡಸಿರಿಯ ದ್ವನಿ ಆಳ್ವರೊಂದಿಗೆ ನಾವು ಕಾರ್ಯಕ್ರಮ ನಡೆಸಬಾರದೆಂದು ಅಖಿಲ ಭಾರತ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದರು.
ಇದಕ್ಕೆ ಖ್ಯಾರೆ ಎನ್ನದೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ರೀಡಾ ಸಾಧಕ-ಸಂಘಟಯು ಕಾರ್ಯಕ್ರಮವನ್ನು ನಡೆಸಲಾಗಿತ್ತು. ಇದಕ್ಕೆ ಅಡ್ಡಿ ಪಡಿಸಲು ಯತ್ನಿಸಿದ ಹಿಂದೂ ಸಂಘಟನೆ ಮೂವರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.