ದಿಡ್ಡಳ್ಳಿ ಆದಿವಾಸಿಗಳ ಪುನರ್ವಸತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು, ಡಿಸೆಂಬರ್, 21 : ಕೊಡಗಿನ ದಿಡ್ಡಳ್ಳಿಯ ಆದಿವಾಸಿ ಕುಟುಂಬಗಳ ಒಕ್ಕಲೆಬ್ಬಿಸಿದನ್ನು ಖಂಡಿಸಿ ಮತ್ತು ಆದಿವಾಸಿಗಳ ಪುನರ್ವಸತಿಗೆ ಆಗ್ರಹಿಸಿ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಮಂಗಳವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ರಾಕೇಶ್ ಕುಂದರ್, 'ಅಹಿಂದ ಪರವೆಂದೇ ಹೇಳಿಕೊಂಡು ಅಧಿಕಾರ ಹಿಡಿದ ರಾಜ್ಯ ಸರಕಾರವು ದಲಿತರ ಮೇಲೆ ಸಂಘಪರಿವಾರವನ್ನೇ ನಾಚಿಸುವಂತೆ ದೌರ್ಜನ್ಯ ಎಸಗಿದೆ.
ಸಿಎಂ ಸಿದ್ದರಾಮಯ್ಯನವರಿಗೆ ದಲಿತರ ಪರ ನಿಜವಾದ ಕಾಳಜಿ ಇದ್ದರೆ ದೌರ್ಜನ್ಯ ಎಸಗಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಕ್ಷಣವೇ ವಜಾಗೊಳಿಸಲಿ ಎಂದು ಆಗ್ರಹಿಸಿದರು. ಅಲ್ಲದೇ ಆದಿವಾಸಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲಿ ಎಂದರು.

ದಲಿತ ಮುಖಂಡ ಅಶೋಕ್ ಕೊಂಚಾಡಿ ಮಾತನಾಡಿ, 'ಆದಿವಾಸಿಗಳನ್ನು ಅಮಾನವೀಯವಾಗಿ ಒಕ್ಕಲೆಬ್ಬಿಸಿರುವ ಘಟನೆ ತೀರಾ ನಾಚಿಕೆಗೇಡು. ಈ ದೌರ್ಜನ್ಯವನ್ನು ಖಂಡಿಸಿ ಉಡುಪಿ ಚಲೋ ಮಾದರಿಯಲ್ಲೇ ಇದೇ 23ರಂದು 'ಮಡಿಕೇರಿ ಚಲೋ' ನಡೆಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಕೋಮು ಸೌಹಾರ್ದ ವೇದಿಕೆ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್, ಎಸ್ಪಿ ಆನಂದ, ಜಮಾಅತೆ ಇಸ್ಲಾಮಿ ಮುಖಂಡ ಶಬೀರ್ ಮೊದಲಾದವರು ಉಪಸ್ಥಿತರಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications