ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಳ್ಯ: ಗುರುವಿನ ಕಾಮ ಪುರಾಣವನ್ನು ಬಿಚ್ಚಿಟ್ಟ ವಿದ್ಯಾರ್ಥಿನಿ

|
Google Oneindia Kannada News

ಮಂಗಳೂರು, ಜುಲೈ 30 : ಗುರು ಬ್ರಹ್ಮ ಗುರು ವಿಷ್ಣು ಗುರ ದೇವೋ ಮಹೇಶ್ವರಾ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಹ, ಎನ್ನುವ ಮಾತು ಗುರುವಿಗಿರುವ ಗೌರವವನ್ನು ಸೂಚಿಸುತ್ತದೆ. ಆದರೆ, ಈ ಗೌರವಕ್ಕೆ ವ್ಯತಿರಿಕ್ತವಾಗಿ ವರ್ತಿಸುವ ಗುರುಗಳೂ ಇದೀಗ ಸಮಾಜದಲ್ಲಿದ್ದು, ಇಂಥ ಗುರುಗಳ ವರ್ತನೆಯಿಂದ ಗುರುವಿನ ಮೇಲಿನ ಗೌರವವೇ ಕುಂದುವಂತೆ ಮಾಡಿದೆ.

ಲೈಂಗಿಕ ಕಿರುಕುಳ: ಕೇರಳದ 'ಮಾತೃಭೂಮಿ' ಚಾನಲ್ ಪತ್ರಕರ್ತನ ಬಂಧನಲೈಂಗಿಕ ಕಿರುಕುಳ: ಕೇರಳದ 'ಮಾತೃಭೂಮಿ' ಚಾನಲ್ ಪತ್ರಕರ್ತನ ಬಂಧನ

ಹೌದು, ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ಮಹಾವಿದ್ಯಾಲಯದ ಪುಷ್ಪರಾಜ್ ಎನ್ನುವ ಈ ಗುರು ಮಹಾಶಯ ತನ್ನ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸುವ ಮೂಲಕ ತನ್ನ ಲಫಂಗತನ ಪ್ರದರ್ಶಿಸಿದ್ದಾನೆ.

Mangaluru: professor sending explicit message to student

ಫೇಸ್ಬುಕ್ ಮೆಸೆಂಜರ್ ನಲ್ಲಿ ವಿದ್ಯಾರ್ಥಿನಿಯ ಜತೆಗೆ ತರಗತಿಯ ವಿಚಾರವಾಗಿ ಮಾತುಕತೆ ಆರಂಭಿಸಿದ್ದ ಈತ ಬಳಿಕ ವಿದ್ಯಾರ್ಥಿನಿಯ ಜತೆ ಅಶ್ಲೀಲವಾಗಿ ಮಾತನಾಡಲು ಪ್ರಾರಂಭಿಸಿದ್ದಾನೆ. ಇದರಿಂದ ನೊಂದ ವಿದ್ಯಾರ್ಥಿನಿ ತನ್ನ ಗುರುವಿನ ಕಾಮ ಪುರಾಣವನ್ನು ಬಯಲು ಮಾಡಿದ್ದಾಳೆ.

ತನ್ನ ಗುರ ಯಾವ ರೀತಿಯಾಗಿ ತನ್ನಲ್ಲಿ ವರ್ತಿಸುತ್ತಿದ್ದಾನೆ ಎನ್ನುವ ಮೆಸೇಜ್ ಗಳ ಸ್ಕ್ರೀನ್ ಶಾಟ್ ತೆಗೆದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾಳೆ. ಇದರಿಂದ ಹೆದರಿದ ಪುಷ್ಪರಾಜ್ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗೆ ಕಿರುಕುಳ ನೀಡಿದ ಈ ಉಪನ್ಯಾಸಕನ ವಿರುದ್ಧ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕಳೆದ 10 ವರ್ಷಗಳಿಂದ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಪುಷ್ಪರಾಜ್ ಗೆ ವಿವಾಹವಾಗಿ ಎರಡು ಮಕ್ಕಳಿದ್ದಾರೆ.

English summary
Professor named Pushaparaj of kukke subramanya University has been sending explicit message to a student and the upset student has tagged the teacher on Facebook and made know the people of his explicit message to her.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X