ಎತ್ತಿನಹೊಳೆ ಬಗ್ಗೆ ಡಿ.26ಕ್ಕೆ ಸಿಎಂ ಜೊತೆ ಚರ್ಚೆ: ಸಚಿವ ರೈ
ಮಂಗಳೂರು, ಡಿಸೆಂಬರ್ 20: ಎತ್ತಿನಹೊಳೆ ಯೋಜನೆ ವಿವಾದದ ಕುರಿತು ಡಿಸೆಂಬರ್ 26ರಂದು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡುತ್ತೇನೆ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು. ತುಂಬೆ ನೇತ್ರಾವತಿ ವೆಂಟೆಡ್ ಡ್ಯಾಂನಲ್ಲಿ ಬಾಗಿನ ಅರ್ಪಿಸಿ, ಪರಿಶೀಲನೆ ನಡೆಸಿದ ನಂತರ ಪತ್ರಕರ್ತರ ಜೊತೆ ಮಾತನಾಡಿದರು.
ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಗಾರರೊಂದಿಗೆ ಸಹ ಚರ್ಚೆ ಮಾಡುತ್ತೇನೆ ಎಂದ ರೈ, ಸಭೆಯಲ್ಲಿ ಪಶ್ಚಿಮವಾಹಿನಿ ಯೋಜನೆ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಈ ಸಭೆಯಲ್ಲಿ ಕರಾವಳಿ ಭಾಗದ ಶಾಸಕ, ಸಚಿವರು ಭಾಗಿಯಾಗಲಿದ್ದಾರೆ ಎಂದರು. ಇದೇ ವೇಳೆ ಸಚಿವ ರಮಾನಾಥ ರೈ, ಕೊಡಗು ಜಿಲ್ಲೆಯ ದಿಡ್ಡಳ್ಳಿಯಲ್ಲಿ ಒಕ್ಕಲೆಬ್ಬಿಸಿರುವ 577 ಅದಿವಾಸಿ ಕುಟುಂಬಗಳಿಗೆ ಅರಣ್ಯದಲ್ಲಿಯೇ ಭೂಮಿ ನೀಡಲು ಸಾಧ್ಯವಿಲ್ಲ. ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಹೇಳಿದರು.[50 ಕೋಟಿ ಲಂಚ ಪಡೆದ ಕೈ ಸಚಿವರ ಹೆಸರು ತಿಳಿಸಿ: ಪೂಜಾರಿ]

ಸಂಕಷ್ಟ ಎದುರಿಸುತ್ತಿರುವ ಅದಿವಾಸಿ ಕುಟುಂಬಗಳಿಗೆ ಕಂದಾಯ ಭೂಮಿ ನೀಡಲಾಗುವುದು ಎಂದರು. ಅನುವಂಶಿಯವಾಗಿ 2005ರ ಹಿಂದೆಯೇ ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ದಿಡ್ಡಳ್ಳಿಯಲ್ಲಿ 577 ಅದಿವಾಸಿ ಕುಟುಂಬಗಳು 3 ತಿಂಗಳ ಹಿಂದೆ ಗುಡಿಸಲುಗಳನ್ನು ನಿರ್ಮಿಸಿವೆ. ಅದನ್ನು ಅರಣ್ಯ ಪ್ರದೇಶದಿಂದ ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದರು.[ಎತ್ತಿನಹೊಳೆಗೆ ಕೋರ್ಟ್ ತಡೆ ನೀಡಲೆಂದು ಮಂಗಳೂರಲ್ಲಿ ಪ್ರಾರ್ಥನೆ]

ಒಕ್ಕಲೆಬ್ಬಿಸಿದ 577 ಅದಿವಾಸಿ ಕುಟುಂಬಗಳಿಗೆ ಅರಣ್ಯದಲ್ಲಿಯೇ ಭೂಮಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ 577 ಅದಿವಾಸಿ ಕುಟುಂಬಗಳಿಗೆ ಪರ್ಯಾಯವಾಗಿ ಕಂದಾಯ ಭೂಮಿ ನೀಡಲಾಗುವುದು, ಈ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications