ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಳ್ಳಾಲದ ಉಳ್ಳಾಲಪೇಟೆಯ ಮಸೀದಿಗೆ ಕಲ್ಲು ತೂರಿದ ಕಿಡಿಗೇಡಿಗಳು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್. 14 : ಜಿಲ್ಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಂದಲ್ಲ ಒಂದು ಅಹಿತಕರ ಘಟನೆಗಳು ನಡೆಯುತ್ತಿವೆ. ಇದರಿಂದ ಮುಂಜಾಗೃತವಾಗಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಆದರೂ ಇತ್ತೀಚೆಗೆ ಈ ಭಾಗದಲ್ಲಿ ಚೂರಿ ಇರಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಅವರ ಮೇಲೆ ಇವರು, ಇವರ ಮೇಲೆ ಅವರು ಹೀಗೆ ಒಬ್ಬರಿಗೊಬ್ಬರು ತಮ್ಮ ಸೇಡಿ ಕಿಚ್ಚನ್ನು ಮುಂದುವರೆಸಿದ್ದಾರೆ. [ಮಂಗಳೂರಿನಲ್ಲಿ ಚೂರಿ ಇರಿತ, ಇಬ್ಬರಿಗೆ ಗಾಯ]

ಮತ್ತೆ ಸೋಮವಾರ ತಡರಾತ್ರಿ ಉಳ್ಳಾಲದ ಉಳ್ಳಾಲಪೇಟೆಯ ರಹ್ಮಾನಿಯ ಮಸೀದಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬೆಳಗ್ಗೆ ನಮಾಝ್ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರಿಂದ ಕೂಡಲೇ ಆರೋಪಿಗಳುನ್ನು ಬಂಧಿಸಬೇಕೆಂದು ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿದೆ. [ಮಂಜನಾಡಿಯಲ್ಲಿ 10 ವರ್ಷದ ವಿದ್ಯಾರ್ಥಿಗೆ ಚೂರಿ ಇರಿತ]

Miscreants pelt stones at Ullalapete Rahmaniya mosque

ಮಸೀದಿಯೊಳಗೆ ಕಲ್ಲುಗಳಿದ್ದು, ಒಂದು ಗಾಜು ಪುಡಿಯಾಗಿದೆ. ಉಳ್ಳಾಲ ಪೊಲೀಸರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾತ್ರಿ 12 ಗಂಟೆಯ ಸುಮಾರಿಗೆ ಮಸೀದಿಗೆ ಬಾಗಿಲು ಹಾಕಿ ತೆರಳಿದ ಬಳಿಕ ಈ ಘಟನೆ ನಡೆದಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಉಳ್ಳಾಲ ಪೊಲೀಸರು ತಿಳಿಸಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಂ ಮುಸುಕಿನ ಗುದ್ದಾಟಗಳು ಮುಂದುವರೆದಿವೆ.

English summary
Unsavoury incidents continue in Ullal area, Miscreants pelted stones at Rahmaniya Jumma mosque at Ullalapete, Mangaluru here on November 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X