ಯಕ್ಷಗಾನ ಸ್ಥಗಿತಗೊಳಿಸುವಂತೆ ಕಿಡಿಗೇಡಿಗಳಿಂದ ಧಮ್ಕಿ
ಮಂಗಳೂರು, ಡಿಸೆಂಬರ್. 23 : ಯಕ್ಷಗಾನ ಖ್ಯಾತ ಕಲಾವಿದರ ತವರು ವಿಟ್ಲ ಕರೋಪಾಡಿ ಸಮೀಪದ ಕನ್ಯಾನ ಶಾಲೆಯೊಂದರಲ್ಲಿ ಗುರುವಾರ ಯಕ್ಷಗಾನ ಪ್ರದರ್ಶನ ಮಾಡದಂತೆ ಕೆಲ ಕಿಡಿಗೇಡಿಗಳು ವಿರೋಧ ವ್ಯಕ್ತಪಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಗುರುವಾರ ಬೆಳಗ್ಗೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಹೊರಗಿನಿಂದ ಬಂದ ಕೆಲವು ಕಿಡಿಗೇಡಿಗಳು ಯಕ್ಷಗಾನ ನಿಲ್ಲಿಸುವಂತೆ ಕಾರ್ಯಕ್ರಮ ವ್ಯವಸ್ಥಾಪಕರನ್ನು ಬೆದರಿಸಿದ್ದಾರೆ. ಇದಕ್ಕೆ ವ್ಯವಸ್ಥಾಪಕರು ಯಾವುದೇ ಕಾರಣಕ್ಕೂ ನಿಗದಿತ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗದು ಯಕ್ಷಗಾನ ಪ್ರದರ್ಶನ ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.
ಇದರಿಂದ ಕೋಪಗೊಂಡ ಕಿಡಿಗೇಡಿಗಳ ತಂಡ ಗೇಟಿನ ಬಳಿ ನಿಂತು ಅರಚಾಟ(ಕಿರುಚಾಟ) ಆರಂಭಿಸಿದ್ದಾರೆ. ಈ ಸಂದರ್ಭ ಯಕ್ಷಣಗಣ ನೋಡುತ್ತಿದ್ದ ಕೆಲ ಮಹಿಳೆಯರು ಕಿಡಿಗೇಡಿಗಳನ್ನು ತರಾಟೆಗೆ ತೆಗೆದುಕೊಂಡರು.

ಕೆಲವು ಮಹಿಳೆಯರು ಭಯಗೊಂಡು ಕಾರ್ಯಕ್ರಮದಿಂದ ಎದ್ದು ಶಾಲೆ ಒಳಗೆ ಹೋಗಿದ್ದರಿಂದ ಗೊಂದಲ ಏರ್ಪಟ್ಟಿತು.
ಕರಾವಳಿಯ ಕಾಲ ಸಂಸ್ಕೃತಿಯನ್ನು ತಡೆಯುವ ಪ್ರಯತ್ನಕ್ಕೆ ಮುಂದಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಗುರುವಾರ ಬೆಳಗ್ಗೆ 10ಗಂಟೆಯಿಂದ ಸಾಯಂಕಾಲ 6ರವರೆಗೆ ಕಾರ್ಯಕ್ರಮಗಳಿಗೆ ಸಮಯ ನಿಗದಿಪಡಿಸಲಾಗಿತ್ತು. ಸರ್ವಧರ್ಮದ ಕಾರ್ಯಕ್ರಮಗಳಿಗೂ ಅವಕಾಶವಿತ್ತು.
ಶಾಲೆಯ ಆರು ಮಂದಿ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಮಧ್ಯಾಹ್ನ 3ರಿಂದ 4ರವರೆಗೆ "ಸುದರ್ಶನ ವಿಜಯ" ಯಕ್ಷಗಾನ ಹಮ್ಮಿಕೊಳ್ಳಲಾಗಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications